ಹುಬ್ಬಳ್ಳಿ: ಒಳ ಮೀಸಲಾತಿಗೆ ಸಂಬಂಧಿಸಿದ ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಹದಿನೆಂಟು ದಿನಗಳಿಂದ ನಗರದ ಮಿನಿ ವಿಧಾನ ಸೌಧದ ಎದುರು ಧರಣಿ ನಡೆಸುತ್ತಿರುವ ಪರಿಶಿಷ್ಟ ಪಂಚಮ ಕುಲಬಾಂಧವರ ಒಕ್ಕೂಟದ ಸದಸ್ಯರನ್ನು ಜವಳಿ ಸಚಿವ ಶಂಕರಪಾಟೀಲ ಮುನೇನಕೊಪ್ಪ ಗುರುವಾರ ಭೇಟಿ ಮಾಡಿದರು.
ಧರಣಿ ನಿರತರ ಅಹವಾಲು ಆಲಿಸಿದ ಮುನೇನಕೊಪ್ಪ, ‘ಸದಾಶಿವಆಯೋಗದ ವರದಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ, ವರದಿ ಜಾರಿಗೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡಲಾಗುವುದು’ ಎಂದು ಭರವಸೆ ನೀಡಿದರು.
‘ತಮ್ಮ ನ್ಯಾಯಯುತವಾದ ಹಕ್ಕುಗಳನ್ನು ಕೇಳುವ ಹಾಗೂ ಅದನ್ನು ಪಡೆಯಲು ಹೋರಾಟ ಮಾಡುವ ಹಕ್ಕುಎಲ್ಲರಿಗೂ ಇದೆ. ಸರ್ಕಾರ ಅವರ ಬೇಡಿಕೆಯನ್ನು ಸಕಾಲದಲ್ಲಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಿದೆ’ ಎಂದರು.