<p><strong>ನವಲಗುಂದ</strong>: ‘ಇಚ್ಛಾಶಕ್ತಿಯೊಂದಿದ್ದರೆ ಮಕ್ಕಳು ಜೀವನದಲ್ಲಿ ಏನು ಬೇಕಾದರೂ ಸಾಧಿಸಬಹುದು’ ಎಂದು ಧಾರವಾಡದ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ವಿಜಯಾನಂದ ಸರಸ್ವತಿ ಮಹಾರಾಜರು ಹೇಳಿದರು.</p>.<p>ಅವರು ಮಂಗಳವಾರ ಸ್ಥಳೀಯ ಶ್ರೀ ಜಗದ್ಗುರು ಅಜಾತ ನಾಗಲಿಂಗ ಸ್ವಾಮೀಜಿ ವಿದ್ಯಾಪೀಠದ ಪ್ರೌಢಶಾಲೆಯ 37ನೇ ವಾರ್ಷಿಕೋತ್ಸವದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>ಅಜಾತ ನಾಗಲಿಂಗಸ್ವಾಮಿ ಮಠದ ಪೀಠಾಧ್ಯಕ್ಷ ವೀರೇಂದ್ರ ಸ್ವಾಮೀಜಿ ಮಾತನಾಡಿ, ‘ಮಕ್ಕಳು ಈ ದೇಶದ ಸಂಪತ್ತು, ಅವರು ಇಂದು ಸಾಧನೆ ಮಾಡಲು ವಿಫುಲವಾದ ಅವಕಾಶಗಳಿವೆ. ಶ್ರಮವಹಿಸಿ ಸಾಧನೆ ಮಾಡಿ ತಂದೆ-ತಾಯಿ ಮತ್ತು ಕಲಿಸಿದ ಗುರುಗಳಿಗೆ ಕೀರ್ತಿ ತರಬೇಕು’ ಎಂದರು.</p>.<p>ಶಾಸಕ ಎನ್.ಎಚ್.ಕೋನರಡ್ಡಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದೇ ವೇಳೆ ಪ್ರೌಢಶಾಲೆಯ ಮೂವರು ಶಿಕ್ಷಕರಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಮ್ಮ ವೈಯಕ್ತಿಯ ವಿಷಯದಲ್ಲಿ ಶೇ 100 ಫಲಿತಾಂಶ ಸಾಧಿಸಿದ್ದಕ್ಕಾಗಿ ಬಂಗಾರದ ಪದಕ ನೀಡಿ ಗೌರವಿಸಲಾಯಿತು.</p>.<p>ಕಳೆದ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶಾಲೆಗೆ ಪ್ರಥಮ ಸ್ಥಾನ ಗಳಿಸಿದ ಪ್ರಜ್ವಲ ಸುರೇಶ ಪಾದಗಟ್ಟಿ ಇವರನ್ನು ಸತ್ಕರಿಸಿ. ವಿವಿಧ ವಿಷಯದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬೊಮ್ಮಕ್ಕನವರ, ವಿಜಯಕುಮಾರ ಪತ್ತಾರ, ಮೋಹನ ನರಗುಂದ, ಬಿ.ಎಂ.ಬಡಿಗೇರ ಭಾಗವಹಿಸಿದ್ದರು. ಮನೋಜ ಮಹೇಂದ್ರಕರ, ಎ.ಆರ್.ಬನ್ನಿಕೋಡ ನಿರೂಪಿಸಿದರು. ಮುಖ್ಯಶಿಕ್ಷಕ ಎಲ್.ಎಚ್.ಕಮ್ಮಾರ ಸ್ವಾಗತಿಸಿದರು. ಎ.ಎನ್.ಹಿರೇಮಠ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವಲಗುಂದ</strong>: ‘ಇಚ್ಛಾಶಕ್ತಿಯೊಂದಿದ್ದರೆ ಮಕ್ಕಳು ಜೀವನದಲ್ಲಿ ಏನು ಬೇಕಾದರೂ ಸಾಧಿಸಬಹುದು’ ಎಂದು ಧಾರವಾಡದ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ವಿಜಯಾನಂದ ಸರಸ್ವತಿ ಮಹಾರಾಜರು ಹೇಳಿದರು.</p>.<p>ಅವರು ಮಂಗಳವಾರ ಸ್ಥಳೀಯ ಶ್ರೀ ಜಗದ್ಗುರು ಅಜಾತ ನಾಗಲಿಂಗ ಸ್ವಾಮೀಜಿ ವಿದ್ಯಾಪೀಠದ ಪ್ರೌಢಶಾಲೆಯ 37ನೇ ವಾರ್ಷಿಕೋತ್ಸವದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>ಅಜಾತ ನಾಗಲಿಂಗಸ್ವಾಮಿ ಮಠದ ಪೀಠಾಧ್ಯಕ್ಷ ವೀರೇಂದ್ರ ಸ್ವಾಮೀಜಿ ಮಾತನಾಡಿ, ‘ಮಕ್ಕಳು ಈ ದೇಶದ ಸಂಪತ್ತು, ಅವರು ಇಂದು ಸಾಧನೆ ಮಾಡಲು ವಿಫುಲವಾದ ಅವಕಾಶಗಳಿವೆ. ಶ್ರಮವಹಿಸಿ ಸಾಧನೆ ಮಾಡಿ ತಂದೆ-ತಾಯಿ ಮತ್ತು ಕಲಿಸಿದ ಗುರುಗಳಿಗೆ ಕೀರ್ತಿ ತರಬೇಕು’ ಎಂದರು.</p>.<p>ಶಾಸಕ ಎನ್.ಎಚ್.ಕೋನರಡ್ಡಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದೇ ವೇಳೆ ಪ್ರೌಢಶಾಲೆಯ ಮೂವರು ಶಿಕ್ಷಕರಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಮ್ಮ ವೈಯಕ್ತಿಯ ವಿಷಯದಲ್ಲಿ ಶೇ 100 ಫಲಿತಾಂಶ ಸಾಧಿಸಿದ್ದಕ್ಕಾಗಿ ಬಂಗಾರದ ಪದಕ ನೀಡಿ ಗೌರವಿಸಲಾಯಿತು.</p>.<p>ಕಳೆದ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶಾಲೆಗೆ ಪ್ರಥಮ ಸ್ಥಾನ ಗಳಿಸಿದ ಪ್ರಜ್ವಲ ಸುರೇಶ ಪಾದಗಟ್ಟಿ ಇವರನ್ನು ಸತ್ಕರಿಸಿ. ವಿವಿಧ ವಿಷಯದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬೊಮ್ಮಕ್ಕನವರ, ವಿಜಯಕುಮಾರ ಪತ್ತಾರ, ಮೋಹನ ನರಗುಂದ, ಬಿ.ಎಂ.ಬಡಿಗೇರ ಭಾಗವಹಿಸಿದ್ದರು. ಮನೋಜ ಮಹೇಂದ್ರಕರ, ಎ.ಆರ್.ಬನ್ನಿಕೋಡ ನಿರೂಪಿಸಿದರು. ಮುಖ್ಯಶಿಕ್ಷಕ ಎಲ್.ಎಚ್.ಕಮ್ಮಾರ ಸ್ವಾಗತಿಸಿದರು. ಎ.ಎನ್.ಹಿರೇಮಠ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>