<p><strong>ಧಾರವಾಡ:</strong> ‘ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ವಿಧಾನಸಭೆ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆ ಕುರಿತು ಘೋಷಣೆ ಮಾಡಬೇಕು’ ಎಂದು ಧಾರವಾಡ ಪತ್ಯೇಕ ಪಾಲಿಕೆ ಮಹಾನಗರ ಪಾಲಿಕೆ ಅಭಿವೃದ್ಧಿ ವೇದಿಕೆ ಅಧ್ಯಕ್ಷ ವೆಂಕಟೇಶ ಮಾಚಕನೂರು ಆಗ್ರಹಿಸಿದರು.</p>.<p>ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆ ಮಾಡಬೇಕು ಎಂದು ನಾಲ್ಕು ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ. ಕಳೆದ ವಿಧಾನಸಭೆ ಅಧಿವೇಶನದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ ಅವರು ಪ್ರತ್ಯೇಕ ಪಾಲಿಕೆ ರಚನೆ ಕುರಿತು ಶೀಘ್ರ ಕ್ರಮವಹಿಸುವುದಾಗಿ ಭರವಸೆ ನೀಡಿದ್ದರು. ಆದರೆ ಯಾವುದೇ ಕ್ರಮವಹಿಸಿಲ್ಲ’ ಎಂದು ದೂರಿದರು.</p>.<p>‘ಶಾಸಕ ವಿನಯ ಕುಲಕರ್ಣಿ ಹಾಗೂ ಪ್ರಸಾದ ಅಬ್ಬಯ್ಯ ಅವರು ಪ್ರತ್ಯೇಕ ಪಾಲಿಕೆ ರಚನೆಗೆ ಮುತುವರ್ಜಿ ವಹಿಸಿದ್ದು, ಪ್ರತ್ಯೇಕ ಪಾಲಿಕೆ ನೀಡುವಂತೆ ಮುಖ್ಯಮಂತ್ರಿ ಅವರ ಗಮನ ಸೆಳೆದಿದ್ದಾರೆ. ಈಚೆಗೆ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚಿಸುವ ಪ್ರಸ್ತಾವಕ್ಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಸಾಮಾನ್ಯ ಸಭೆಯಲ್ಲಿ ಪಕ್ಷಾತೀತವಾಗಿ ಅನುಮೋದನೆ ನೀಡಲಾಗಿದೆ’ ಎಂದು ಹೇಳಿದರು.</p>.<p>ವಿಠ್ಠಲ ಕಮ್ಮಾರ, ರವಿಕುಮಾರ ಮಾಳಿಗೇರ, ವಸಂತ ಅರ್ಕಾಚಾರ, ಅರವಿಂದ ಏಗನಗೌಡರ, ದಾನಪ್ಪ ಕಬ್ಬೇರ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ‘ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ವಿಧಾನಸಭೆ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆ ಕುರಿತು ಘೋಷಣೆ ಮಾಡಬೇಕು’ ಎಂದು ಧಾರವಾಡ ಪತ್ಯೇಕ ಪಾಲಿಕೆ ಮಹಾನಗರ ಪಾಲಿಕೆ ಅಭಿವೃದ್ಧಿ ವೇದಿಕೆ ಅಧ್ಯಕ್ಷ ವೆಂಕಟೇಶ ಮಾಚಕನೂರು ಆಗ್ರಹಿಸಿದರು.</p>.<p>ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆ ಮಾಡಬೇಕು ಎಂದು ನಾಲ್ಕು ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ. ಕಳೆದ ವಿಧಾನಸಭೆ ಅಧಿವೇಶನದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ ಅವರು ಪ್ರತ್ಯೇಕ ಪಾಲಿಕೆ ರಚನೆ ಕುರಿತು ಶೀಘ್ರ ಕ್ರಮವಹಿಸುವುದಾಗಿ ಭರವಸೆ ನೀಡಿದ್ದರು. ಆದರೆ ಯಾವುದೇ ಕ್ರಮವಹಿಸಿಲ್ಲ’ ಎಂದು ದೂರಿದರು.</p>.<p>‘ಶಾಸಕ ವಿನಯ ಕುಲಕರ್ಣಿ ಹಾಗೂ ಪ್ರಸಾದ ಅಬ್ಬಯ್ಯ ಅವರು ಪ್ರತ್ಯೇಕ ಪಾಲಿಕೆ ರಚನೆಗೆ ಮುತುವರ್ಜಿ ವಹಿಸಿದ್ದು, ಪ್ರತ್ಯೇಕ ಪಾಲಿಕೆ ನೀಡುವಂತೆ ಮುಖ್ಯಮಂತ್ರಿ ಅವರ ಗಮನ ಸೆಳೆದಿದ್ದಾರೆ. ಈಚೆಗೆ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚಿಸುವ ಪ್ರಸ್ತಾವಕ್ಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಸಾಮಾನ್ಯ ಸಭೆಯಲ್ಲಿ ಪಕ್ಷಾತೀತವಾಗಿ ಅನುಮೋದನೆ ನೀಡಲಾಗಿದೆ’ ಎಂದು ಹೇಳಿದರು.</p>.<p>ವಿಠ್ಠಲ ಕಮ್ಮಾರ, ರವಿಕುಮಾರ ಮಾಳಿಗೇರ, ವಸಂತ ಅರ್ಕಾಚಾರ, ಅರವಿಂದ ಏಗನಗೌಡರ, ದಾನಪ್ಪ ಕಬ್ಬೇರ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>