ಮನೆ ಬಿದ್ದಿದ್ದಕ್ಕೆ ಸರಿಯಾದ ಪರಿಹಾರ ಸಿಕ್ಕಿಲ್ಲ. ಐದಾರು ತಿಂಗಳಿನಿಂದ ಅಲೆದಾಡಿ ಸಾಕಾಗಿದೆ. ಶಾಸಕ ಅಮೃತ ದೇಸಾಯಿ ಅವರಿಗೆ ಮನವಿ ಕೊಟ್ಟರೆ, ಕೇಂದ್ರ ಸಚಿವ ಜೋಶಿ ಅವರ ಬಳಿಗೆ ಹೋಗಿ ಎನ್ನುತ್ತಾರೆ. ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದಾಗ ಅಮೃತ ದೇಸಾಯಿ ಅವರಿಗೆ ಕರೆ ಮಾಡಿ ತಿಳಿಸುತ್ತೇನೆ, ಭೇಟಿ ಮಾಡಿ ಎಂದಿದ್ದರು. ನಮ್ಮ ಕಷ್ಟ ಹೇಳಿಕೊಂಡರೂ ಯಾರು ಸಹಾಯ ಮಾಡಲಿಲ್ಲ. ಮನನೊಂದು ನಿಮ್ಮ ಮನೆಯಲ್ಲಿಯೇ ವಿಷ ತೆಗೆದುಕೊಳ್ಳುತ್ತಿದ್ದೇನೆ ಎಂದು ಸಚಿವ ಜೋಶಿ ಅವರಿಗೆ ಪತ್ರದಲ್ಲಿ ಶ್ರೀದೇವಿ ಬರೆದಿದ್ದಾರೆ.