<p class="rtejustify"><strong>ಹುಬ್ಬಳ್ಳಿ:</strong> ಪುರುಷ ಪ್ರಧಾನ ವ್ಯವಸ್ಥೆ ಮೇಳೈಸಿರುವ ಈಗಿನ ಸಮಾಜದಲ್ಲಿ ಮಹಿಳೆಯರು ಲಿಂಗ ಅಸಮಾನತೆ, ದೌರ್ಜನ್ಯಕ್ಕೆ ಬಲಿಯಾಗುತ್ತಿದ್ದಾರೆ. ಇದನ್ನು ಹೋಗಲಾಡಿಸುವಲ್ಲಿ ನಾಗರಿಕ ಸಮಾಜದ ಪಾತ್ರ ಅತಿ ಮುಖ್ಯವಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಮಹಿಳಾ ಅಧ್ಯಯನ ಕೇಂದ್ರದ ಹಿರಿಯ ಸಂಶೋಧಕಿ ಡಾ.ಆರ್.ಇಂದಿರಾ ಬುಧವಾರ ಪ್ರತಿಪಾದಿಸಿದರು.</p>.<p class="rtejustify">ಕೆ.ಎಲ್.ಇ ಸಂಸ್ಥೆಯ ಕಾಡಸಿದ್ಧೇಶ್ವರ ಕಲಾ ಮಹಾವಿದ್ಯಾಲಯ, ಎಚ್.ಎಸ್. ಕೋತಂಬ್ರಿ ವಿಜ್ಞಾನ ಸಂಸ್ಥೆಯ ಸಮಾಜಶಾಸ್ತ್ರ ವಿಭಾಗ ಮತ್ತು ಮನೋಶಾಸ್ತ್ರ ವಿಭಾಗ ಜಂಟಿಯಾಗಿ ಏರ್ಪಡಿಸಿದ್ದ ‘ಸಾಂಕ್ರಾಮಿಕ ಪಿಡುಗು ಪರಿಸ್ಥಿತಿಯಲ್ಲಿ ಲಿಂಗ ಸಂವೇದನಾಶೀಲತೆ’ ವಿಷಯ ಕುರಿತು ರಾಷ್ಟ್ರೀಯ ವೆಬಿನಾರ್ನಲ್ಲಿ ಅವರು ಮಾತನಾಡಿದರು.</p>.<p class="rtejustify">’ಕೋವಿಡ್ನಂಥ ಸಾಂಕ್ರಾಮಿಕ ಪಿಡುಗೇ ಇರಲಿ; ಸುನಾಮಿಯೇ ಬರಲಿ, ಮಹಿಳೆಯರೇ ಮೊದಲು ಆರ್ಥಿಕವಾಗಿ ತೊಂದರೆಗೆ ಒಳಗಾಗಿ ಅನ್ಯಾಯ, ದಬ್ಬಾಳಿಕೆ, ಅತ್ಯಾಚಾರ ಮತ್ತು ಕೌಟುಂಬಿಕ ಹಿಂಸಾಚಾರಕ್ಕೆ ಬಲಿಯಾಗುತ್ತಾರೆ. ಎಲ್ಲಕ್ಕಿಂತ ಹೆಚ್ಚಾಗಿ ಲಸಿಕೆ ಪಡೆಯುವಲ್ಲಿ ಹಿಂದುಳಿದಿದ್ದಾರೆ. ಮನೆಯಲ್ಲಿರುವುದೇ ಸುರಕ್ಷಿತ ಎನ್ನುವ ಭಾವನೆ ಅವರಲ್ಲಿ ಹುಸಿಯಾಗುತ್ತಿದೆ’ ಎಂದು ಆತಂಕ ವ್ಯಕ್ತಪಡಿಸಿದರು.</p>.<p class="rtejustify">’ದೇಶದಲ್ಲಿನ ಸುಮಾರು ಶೇ 40ರಷ್ಟು ಕುಟುಂಬಗಳು ಮಹಿಳೆಯರ ಆದಾಯದ ಮೇಲೆಯೇ ಅವಲಂಬಿಸಿವೆ. ಇವರೆಲ್ಲರೂ ಅಸಂಘಟಿತ ಕಾರ್ಮಿಕ ವಲಯಕ್ಕೆ ಸೇರಿದವರಾಗಿದ್ದು, ಇವರಿಗೆ ಯಾವುದೇ ವೇತನ, ಸೇವಾ ಭದ್ರತೆ ಇಲ್ಲ. ಇದರಿಂದ ಅವರು ಕೆಲಸವಿಲ್ಲದಿದ್ದರೆ ಉಪವಾಸವೇ ಗತಿ ಎನ್ನುವಂತಾಗಿದೆ’ ಎಂದರು.</p>.<p class="rtejustify">ಕಾಲೇಜಿನ ಪ್ರಾಚಾರ್ಯೆ ಡಾ.ಉಮಾ ವಿ. ನೇರ್ಲೆ ಅಧ್ಯಕ್ಷತೆ ವಹಿಸಿದ್ದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ವೈ.ಎನ್. ನಾಗೇಶ್, ಗಣಿತ ಉಪನ್ಯಾಸಕಿ ಡಾ.ಎಂ.ಅರ್ಚನಾ, ಮನೋಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಸುನೀತಾ ಹಾನಗಲ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="rtejustify"><strong>ಹುಬ್ಬಳ್ಳಿ:</strong> ಪುರುಷ ಪ್ರಧಾನ ವ್ಯವಸ್ಥೆ ಮೇಳೈಸಿರುವ ಈಗಿನ ಸಮಾಜದಲ್ಲಿ ಮಹಿಳೆಯರು ಲಿಂಗ ಅಸಮಾನತೆ, ದೌರ್ಜನ್ಯಕ್ಕೆ ಬಲಿಯಾಗುತ್ತಿದ್ದಾರೆ. ಇದನ್ನು ಹೋಗಲಾಡಿಸುವಲ್ಲಿ ನಾಗರಿಕ ಸಮಾಜದ ಪಾತ್ರ ಅತಿ ಮುಖ್ಯವಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಮಹಿಳಾ ಅಧ್ಯಯನ ಕೇಂದ್ರದ ಹಿರಿಯ ಸಂಶೋಧಕಿ ಡಾ.ಆರ್.ಇಂದಿರಾ ಬುಧವಾರ ಪ್ರತಿಪಾದಿಸಿದರು.</p>.<p class="rtejustify">ಕೆ.ಎಲ್.ಇ ಸಂಸ್ಥೆಯ ಕಾಡಸಿದ್ಧೇಶ್ವರ ಕಲಾ ಮಹಾವಿದ್ಯಾಲಯ, ಎಚ್.ಎಸ್. ಕೋತಂಬ್ರಿ ವಿಜ್ಞಾನ ಸಂಸ್ಥೆಯ ಸಮಾಜಶಾಸ್ತ್ರ ವಿಭಾಗ ಮತ್ತು ಮನೋಶಾಸ್ತ್ರ ವಿಭಾಗ ಜಂಟಿಯಾಗಿ ಏರ್ಪಡಿಸಿದ್ದ ‘ಸಾಂಕ್ರಾಮಿಕ ಪಿಡುಗು ಪರಿಸ್ಥಿತಿಯಲ್ಲಿ ಲಿಂಗ ಸಂವೇದನಾಶೀಲತೆ’ ವಿಷಯ ಕುರಿತು ರಾಷ್ಟ್ರೀಯ ವೆಬಿನಾರ್ನಲ್ಲಿ ಅವರು ಮಾತನಾಡಿದರು.</p>.<p class="rtejustify">’ಕೋವಿಡ್ನಂಥ ಸಾಂಕ್ರಾಮಿಕ ಪಿಡುಗೇ ಇರಲಿ; ಸುನಾಮಿಯೇ ಬರಲಿ, ಮಹಿಳೆಯರೇ ಮೊದಲು ಆರ್ಥಿಕವಾಗಿ ತೊಂದರೆಗೆ ಒಳಗಾಗಿ ಅನ್ಯಾಯ, ದಬ್ಬಾಳಿಕೆ, ಅತ್ಯಾಚಾರ ಮತ್ತು ಕೌಟುಂಬಿಕ ಹಿಂಸಾಚಾರಕ್ಕೆ ಬಲಿಯಾಗುತ್ತಾರೆ. ಎಲ್ಲಕ್ಕಿಂತ ಹೆಚ್ಚಾಗಿ ಲಸಿಕೆ ಪಡೆಯುವಲ್ಲಿ ಹಿಂದುಳಿದಿದ್ದಾರೆ. ಮನೆಯಲ್ಲಿರುವುದೇ ಸುರಕ್ಷಿತ ಎನ್ನುವ ಭಾವನೆ ಅವರಲ್ಲಿ ಹುಸಿಯಾಗುತ್ತಿದೆ’ ಎಂದು ಆತಂಕ ವ್ಯಕ್ತಪಡಿಸಿದರು.</p>.<p class="rtejustify">’ದೇಶದಲ್ಲಿನ ಸುಮಾರು ಶೇ 40ರಷ್ಟು ಕುಟುಂಬಗಳು ಮಹಿಳೆಯರ ಆದಾಯದ ಮೇಲೆಯೇ ಅವಲಂಬಿಸಿವೆ. ಇವರೆಲ್ಲರೂ ಅಸಂಘಟಿತ ಕಾರ್ಮಿಕ ವಲಯಕ್ಕೆ ಸೇರಿದವರಾಗಿದ್ದು, ಇವರಿಗೆ ಯಾವುದೇ ವೇತನ, ಸೇವಾ ಭದ್ರತೆ ಇಲ್ಲ. ಇದರಿಂದ ಅವರು ಕೆಲಸವಿಲ್ಲದಿದ್ದರೆ ಉಪವಾಸವೇ ಗತಿ ಎನ್ನುವಂತಾಗಿದೆ’ ಎಂದರು.</p>.<p class="rtejustify">ಕಾಲೇಜಿನ ಪ್ರಾಚಾರ್ಯೆ ಡಾ.ಉಮಾ ವಿ. ನೇರ್ಲೆ ಅಧ್ಯಕ್ಷತೆ ವಹಿಸಿದ್ದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ವೈ.ಎನ್. ನಾಗೇಶ್, ಗಣಿತ ಉಪನ್ಯಾಸಕಿ ಡಾ.ಎಂ.ಅರ್ಚನಾ, ಮನೋಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಸುನೀತಾ ಹಾನಗಲ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>