<p><strong>ಹುಬ್ಬಳ್ಳಿ: </strong>‘ವಿಧಾನಸಭಾ ಚುನಾವಣೆಗೆ ಒಂದು ವರ್ಷ ಬಾಕಿ ಇದ್ದು, ಮುಖಂಡರು ಪಕ್ಷಕ್ಕೆ ಮುಜುಗರ ಆಗುವಂತಹ ಹೇಳಿಕೆಗಳನ್ನು ನೀಡಬಾರದು’ ಎಂದು ಹುಬ್ಬಳ್ಳಿ–ಧಾರವಾಡ ಮಹಾನಗರ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಅಲ್ತಾಫ ಹುಸೇನ್ ಹಳ್ಳೂರ ಸೂಚಿಸಿದ್ದಾರೆ.</p>.<p>‘ಟಿಕೆಟ್ಗಾಗಿ ಲಾಬಿ, ಪರಸ್ಪರ ಕಿತ್ತಾಟ, ಬೇಜವಾಬ್ದಾರಿಯುತ ಹೇಳಿಕೆ ಮತ್ತು ಬಣ ರಾಜಕೀಯದಿಂದ ಪಕ್ಷಕ್ಕೆ ಮುಜುಗರವಾಗುತ್ತಿದ್ದು, ಮುಖಂಡರು ತಮ್ಮ ನಡವಳಿಕೆ ಸುಧಾರಿಸಿಕೊಳ್ಳಬೇಕು. ಬೇರೆ ಪಕ್ಷದ ಕಡೆ ಮುಖ ಮಾಡಿರುವವರಿಗೂ ಕಾಂಗ್ರೆಸ್ಗೂ ಸಂಬಂಧವಿಲ್ಲ. ಪಕ್ಷದಲ್ಲಿ ಶಿಸ್ತು ಮುಖ್ಯ’ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.</p>.<p>‘ಟಿಕೆಟ್ ಆಕಾಂಕ್ಷಿಗಳು ತಾವು ಪ್ರತಿನಿಧಿಸಲು ಉದ್ದೇಶಿಸಿರುವ ಕ್ಷೇತ್ರಗಳಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಬೂತ್ ಮಟ್ಟದಿಂದ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸಲು ಕಾರ್ಯಪ್ರವೃತ್ತರಾಗಬೇಕು’ ಎಂದು ತಿಳಿಸಿದ್ದಾರೆ.</p>.<p>‘ರಾಜ್ಯದಲ್ಲಿ ಕಾಂಗ್ರೆಸ್ ಅನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಶಿಸ್ತು, ತಾಳ್ಮೆ, ನಿಸ್ವಾರ್ಥ ಕೆಲಸ, ಸುಧಾರಣೆ ಕಾಯ್ದುಕೊಳ್ಳಬೇಕು. ಸಾಮಾಜಿಕ ಸಾಮರಸ್ಯ ಬಲಪಡಿಸಲು ಹಾಗೂ ಸಂವಿಧಾನದ ಮೂಲ ಆಶಯ ರಕ್ಷಿಸಲು ಕಾರ್ಯಕರ್ತರು ಅವಿರತವಾಗಿ ಶ್ರಮಿಸಬೇಕು’ ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>‘ವಿಧಾನಸಭಾ ಚುನಾವಣೆಗೆ ಒಂದು ವರ್ಷ ಬಾಕಿ ಇದ್ದು, ಮುಖಂಡರು ಪಕ್ಷಕ್ಕೆ ಮುಜುಗರ ಆಗುವಂತಹ ಹೇಳಿಕೆಗಳನ್ನು ನೀಡಬಾರದು’ ಎಂದು ಹುಬ್ಬಳ್ಳಿ–ಧಾರವಾಡ ಮಹಾನಗರ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಅಲ್ತಾಫ ಹುಸೇನ್ ಹಳ್ಳೂರ ಸೂಚಿಸಿದ್ದಾರೆ.</p>.<p>‘ಟಿಕೆಟ್ಗಾಗಿ ಲಾಬಿ, ಪರಸ್ಪರ ಕಿತ್ತಾಟ, ಬೇಜವಾಬ್ದಾರಿಯುತ ಹೇಳಿಕೆ ಮತ್ತು ಬಣ ರಾಜಕೀಯದಿಂದ ಪಕ್ಷಕ್ಕೆ ಮುಜುಗರವಾಗುತ್ತಿದ್ದು, ಮುಖಂಡರು ತಮ್ಮ ನಡವಳಿಕೆ ಸುಧಾರಿಸಿಕೊಳ್ಳಬೇಕು. ಬೇರೆ ಪಕ್ಷದ ಕಡೆ ಮುಖ ಮಾಡಿರುವವರಿಗೂ ಕಾಂಗ್ರೆಸ್ಗೂ ಸಂಬಂಧವಿಲ್ಲ. ಪಕ್ಷದಲ್ಲಿ ಶಿಸ್ತು ಮುಖ್ಯ’ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.</p>.<p>‘ಟಿಕೆಟ್ ಆಕಾಂಕ್ಷಿಗಳು ತಾವು ಪ್ರತಿನಿಧಿಸಲು ಉದ್ದೇಶಿಸಿರುವ ಕ್ಷೇತ್ರಗಳಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಬೂತ್ ಮಟ್ಟದಿಂದ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸಲು ಕಾರ್ಯಪ್ರವೃತ್ತರಾಗಬೇಕು’ ಎಂದು ತಿಳಿಸಿದ್ದಾರೆ.</p>.<p>‘ರಾಜ್ಯದಲ್ಲಿ ಕಾಂಗ್ರೆಸ್ ಅನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಶಿಸ್ತು, ತಾಳ್ಮೆ, ನಿಸ್ವಾರ್ಥ ಕೆಲಸ, ಸುಧಾರಣೆ ಕಾಯ್ದುಕೊಳ್ಳಬೇಕು. ಸಾಮಾಜಿಕ ಸಾಮರಸ್ಯ ಬಲಪಡಿಸಲು ಹಾಗೂ ಸಂವಿಧಾನದ ಮೂಲ ಆಶಯ ರಕ್ಷಿಸಲು ಕಾರ್ಯಕರ್ತರು ಅವಿರತವಾಗಿ ಶ್ರಮಿಸಬೇಕು’ ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>