‘ತಮ್ಮ ಶಾಸಕರು ಹತಾಶರಾಗಿರುವುದನ್ನು ತಿಳಿದಿರುವ ಕಾಂಗ್ರೆಸ್ ನಾಯಕರು ಈಗ ಸ್ಪೀಕರ್ ಆಯ್ಕೆಯನ್ನು ಪ್ರಶ್ನಿಸುತ್ತಿದ್ದಾರೆ. ಯಾರು ಏನು ಹೇಳಿದರೂ ಸರಿ, ನಾಳೆ ಬೋಪಯ್ಯ ಅವರ ನೇತೃತ್ವದಲ್ಲಿ ಅಧಿವೇಶನ ನಡೆಯಲಿದೆ. ನಮ್ಮ ಪರ 120ಕ್ಕೂ ಹೆಚ್ಚು ಶಾಸಕರು ಇದ್ದಾರೆ. ಯಡಿಯೂರಪ್ಪ ಬಹುಮತ ಸಾಬೀತುಪಡಿಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.