ವಿಧಾನಸೌಧದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇದಕ್ಕೆ ವಿಧಾನಸೌಧದ ವೆಸ್ಟ್ ಗೇಟ್ಬಳಿ ಸಿಕ್ಕ ಹಣವೇ ಉದಾಹರಣೆ. ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿದೆ. ಆದರೆ ಮುಖ್ಯಮಂತ್ರಿ ಕುಮಾರಸ್ವಾಮಿ ಮಾತ್ರ ಈ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಕುಮಾರಸ್ವಾಮಿ ಅಧಿಕಾರಕ್ಕೆ ಬರುವ ಮೊದಲು ಗಣಿಗಾರಿಗೆ ವಿರುದ್ಧ ಮಾತನಾಡಿದ್ದರು. ಈಗ ಮತ್ತೆ ಬಳ್ಳಾರಿಯಲ್ಲಿ ಗಣಿಗಾರಿಕೆ ಪ್ರಾರಂಭವಾಗಿದೆ. ಅವರು ಕೊಟ್ಟ ಮಾತುಉಳಿಸಿಕೊಳ್ಳಲಿಲ್ಲ ಎಂದು ಲೇವಡಿ ಮಾಡಿದರು.