<p><strong>ನವಲಗುಂದ:</strong> ತಾಲ್ಲೂಕಿನ ಗುಡಿಸಾಗರ, ನಾಗನೂರ, ಸೋಟಕನಾಳ, ಕಡದಳ್ಳಿ, ಅರಟ್ಟಿ, ತಡಹಾಳ ಹಾಗೂ ಸುತ್ತಲಿನ ಗ್ರಾಮಗಳಲ್ಲಿ ವ್ಯಾಪ್ತಿಯಲ್ಲಿ ಹೆಸರು ಮತ್ತು ಉದ್ದು ಬೆಳೆಗೆ ಹಳದಿ ಚುಕ್ಕಿ ರೋಗ ಕಾಣಿಸಿಕೊಂಡಿದ್ದು, ರೈತರು ನಷ್ಟದ ಭೀತಿ ಎದುರಿಸುತ್ತಿದ್ದಾರೆ.</p>.<p>ಒಂದು ತಿಂಗಳ ಬೆಳೆ ಸಮೃದ್ಧವಾಗಿ ಬೆಳೆದಿದೆ. ಆದರೆ ಮಳೆ ಪ್ರಮಾಣ ಜಾಸ್ತಿಯಾಗಿರುವುದರಿಂದ ಮಣ್ಣಿನ ತೇವಾಂಶ ಹೆಚ್ಚಾಗಿ ಹೆಸರು– ಉದ್ದು ಬೆಳೆಗಳು ಹಾಳಾಗುತ್ತಿವೆ ಎಂದು ನವಲಗುಂದದ ರೈತ ಮಹೇಶ ಹಳ್ಳದ ಆತಂಕ ವ್ಯಕ್ತಪಡಿಸಿದರು.</p>.<p>ಬೆಳೆಗಳನ್ನು ಉಳಿಸಿಕೊಳ್ಳಲು ಕೃಷಿ ಇಲಾಖೆ ಮಾರ್ಗಸೂಚಿಯನ್ನು ಕೂಡಲೇ ತಿಳಿಸಬೇಕು. ಗ್ರಾಮೀಣ ಭಾಗಗಳಲ್ಲಿ ಈ ಕುರಿತು ವ್ಯಾಪಕ ಪ್ರಚಾರ ನಡೆಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.</p>.<p>ಪ್ರಾರಂಭಿಕ ಹಂತದಲ್ಲಿ ಯಲೋವ ಮೆಸಾಯಿಕ ವೈರಸ್ ಕಾಣಿಸಿಕೊಂಡು ಸಸಿಗಳು ಹಳದಿ ಬಣ್ಣಕ್ಕೆ ತಿರುಗಿವೆ. ಈ ಬಗ್ಗೆ ಸಲಹೆ– ಸೂಚನೆ ಪಡೆಯಲು ರೈತರು ತಾಲ್ಲೂಕು ಕೃಷಿ ಉಪನಿರ್ದೇಶಕರ ಕಚೇರಿ ಸಂಪರ್ಕಿಸಲು ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವಲಗುಂದ:</strong> ತಾಲ್ಲೂಕಿನ ಗುಡಿಸಾಗರ, ನಾಗನೂರ, ಸೋಟಕನಾಳ, ಕಡದಳ್ಳಿ, ಅರಟ್ಟಿ, ತಡಹಾಳ ಹಾಗೂ ಸುತ್ತಲಿನ ಗ್ರಾಮಗಳಲ್ಲಿ ವ್ಯಾಪ್ತಿಯಲ್ಲಿ ಹೆಸರು ಮತ್ತು ಉದ್ದು ಬೆಳೆಗೆ ಹಳದಿ ಚುಕ್ಕಿ ರೋಗ ಕಾಣಿಸಿಕೊಂಡಿದ್ದು, ರೈತರು ನಷ್ಟದ ಭೀತಿ ಎದುರಿಸುತ್ತಿದ್ದಾರೆ.</p>.<p>ಒಂದು ತಿಂಗಳ ಬೆಳೆ ಸಮೃದ್ಧವಾಗಿ ಬೆಳೆದಿದೆ. ಆದರೆ ಮಳೆ ಪ್ರಮಾಣ ಜಾಸ್ತಿಯಾಗಿರುವುದರಿಂದ ಮಣ್ಣಿನ ತೇವಾಂಶ ಹೆಚ್ಚಾಗಿ ಹೆಸರು– ಉದ್ದು ಬೆಳೆಗಳು ಹಾಳಾಗುತ್ತಿವೆ ಎಂದು ನವಲಗುಂದದ ರೈತ ಮಹೇಶ ಹಳ್ಳದ ಆತಂಕ ವ್ಯಕ್ತಪಡಿಸಿದರು.</p>.<p>ಬೆಳೆಗಳನ್ನು ಉಳಿಸಿಕೊಳ್ಳಲು ಕೃಷಿ ಇಲಾಖೆ ಮಾರ್ಗಸೂಚಿಯನ್ನು ಕೂಡಲೇ ತಿಳಿಸಬೇಕು. ಗ್ರಾಮೀಣ ಭಾಗಗಳಲ್ಲಿ ಈ ಕುರಿತು ವ್ಯಾಪಕ ಪ್ರಚಾರ ನಡೆಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.</p>.<p>ಪ್ರಾರಂಭಿಕ ಹಂತದಲ್ಲಿ ಯಲೋವ ಮೆಸಾಯಿಕ ವೈರಸ್ ಕಾಣಿಸಿಕೊಂಡು ಸಸಿಗಳು ಹಳದಿ ಬಣ್ಣಕ್ಕೆ ತಿರುಗಿವೆ. ಈ ಬಗ್ಗೆ ಸಲಹೆ– ಸೂಚನೆ ಪಡೆಯಲು ರೈತರು ತಾಲ್ಲೂಕು ಕೃಷಿ ಉಪನಿರ್ದೇಶಕರ ಕಚೇರಿ ಸಂಪರ್ಕಿಸಲು ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>