<p><strong>ಧಾರವಾಡ: </strong>ಇಲ್ಲಿನ ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ.</p>.<p>ಹಾಲಿ ಶಾಸಕರು, ಸಂಸದರು ಭಾಗಿಯಾಗಿರುವ ಪ್ರಕರಣಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಇದ್ದು, ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ವಿನಯ ಕುಲಕರ್ಣಿ ಎರಡು ಬಾರಿ ಶಾಸಕರಾಗಿದ್ದರು. ಹೀಗಾಗಿ ಈ ಪ್ರಕರಣದ ವಿಚಾರಣೆ ಜನಪ್ರತಿನಿಧಗಳ ನ್ಯಾಯಾಲಯದಲ್ಲಿ ನಡೆಯಬೇಕು ಎಂದು ಅರ್ಜಿ ಸಲ್ಲಿಸಿ, ಆರೋಪಿ ಪರ ವಕೀಲರಾದ ಬಾಹುಬಲಿ ಧನವಾಡೆ ನ್ಯಾಯಾಲಯದ ಗಮನ ಸೆಳೆದಿದ್ದರು.</p>.<p>ಅರ್ಜಿ ಪರಿಗಣಿಸಿದ ನ್ಯಾಯಾಧೀಶ ಸಿ.ಎಂ.ಗಂಗಾಧರ ಅವರು, 'ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ವಿನಯ ಕುಲಕರ್ಣಿ ಮಾಜಿ ಶಾಸಕ ಆಗಿರುವುದರಿಂದ ಪ್ರಕರಣದ ವಿಚಾರಣೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವ್ಯಾಪ್ತಿಗೆ ಒಳಪಡುತ್ತದೆ ಎಂದು ಅಭಿಪ್ರಾಯಪಟ್ಟು, ಪ್ರಕರಣದ ವರ್ಗಾವಣೆಗೆ ಆದೇಶ ಹೊರಡಿಸಿದ್ದಾರೆ.</p>.<p>ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ಕಳೆದ ನ. 5 ರಂದು ಬಂಧಿಸಿದ್ದರು. ಈಗಾಗಲೇ ತನಿಖೆ ಪೂರ್ಣಗೊಳಿಸಿರುವ ಸಿಬಿಐ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಕೂಡಾ ಸಲ್ಲಿಸಿದೆ. ಮುಂದಿನ ದಿನಗಳಲ್ಲಿ ಪ್ರಕರಣದ ವಿಚಾರಣೆ ಬೆಂಗಳೂರಿನ ನ್ಯಾಯಾಲಯದಲ್ಲಿ ನಡೆಯಲಿದೆ ಎಂದು ವಿನಯ ಪರ ವಕೀಲರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ: </strong>ಇಲ್ಲಿನ ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ.</p>.<p>ಹಾಲಿ ಶಾಸಕರು, ಸಂಸದರು ಭಾಗಿಯಾಗಿರುವ ಪ್ರಕರಣಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಇದ್ದು, ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ವಿನಯ ಕುಲಕರ್ಣಿ ಎರಡು ಬಾರಿ ಶಾಸಕರಾಗಿದ್ದರು. ಹೀಗಾಗಿ ಈ ಪ್ರಕರಣದ ವಿಚಾರಣೆ ಜನಪ್ರತಿನಿಧಗಳ ನ್ಯಾಯಾಲಯದಲ್ಲಿ ನಡೆಯಬೇಕು ಎಂದು ಅರ್ಜಿ ಸಲ್ಲಿಸಿ, ಆರೋಪಿ ಪರ ವಕೀಲರಾದ ಬಾಹುಬಲಿ ಧನವಾಡೆ ನ್ಯಾಯಾಲಯದ ಗಮನ ಸೆಳೆದಿದ್ದರು.</p>.<p>ಅರ್ಜಿ ಪರಿಗಣಿಸಿದ ನ್ಯಾಯಾಧೀಶ ಸಿ.ಎಂ.ಗಂಗಾಧರ ಅವರು, 'ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ವಿನಯ ಕುಲಕರ್ಣಿ ಮಾಜಿ ಶಾಸಕ ಆಗಿರುವುದರಿಂದ ಪ್ರಕರಣದ ವಿಚಾರಣೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವ್ಯಾಪ್ತಿಗೆ ಒಳಪಡುತ್ತದೆ ಎಂದು ಅಭಿಪ್ರಾಯಪಟ್ಟು, ಪ್ರಕರಣದ ವರ್ಗಾವಣೆಗೆ ಆದೇಶ ಹೊರಡಿಸಿದ್ದಾರೆ.</p>.<p>ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ಕಳೆದ ನ. 5 ರಂದು ಬಂಧಿಸಿದ್ದರು. ಈಗಾಗಲೇ ತನಿಖೆ ಪೂರ್ಣಗೊಳಿಸಿರುವ ಸಿಬಿಐ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಕೂಡಾ ಸಲ್ಲಿಸಿದೆ. ಮುಂದಿನ ದಿನಗಳಲ್ಲಿ ಪ್ರಕರಣದ ವಿಚಾರಣೆ ಬೆಂಗಳೂರಿನ ನ್ಯಾಯಾಲಯದಲ್ಲಿ ನಡೆಯಲಿದೆ ಎಂದು ವಿನಯ ಪರ ವಕೀಲರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>