ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಯುವ ಮುಖಂಡನ‌ ಮೇಲೆ‌ ಮಾರಕಾಸ್ತ್ರಗಳಿಂದ ಹಲ್ಲೆ

Last Updated 3 ಅಕ್ಟೋಬರ್ 2022, 5:21 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಇಲ್ಲಿನ‌ ಸೋನಿಯಾ ಗಾಂಧಿ ನಗರದ ನಿಜಾಮುದ್ದೀನ್ ಪ್ಲಾಟ್ ನಲ್ಲಿ ಕಾಂಗ್ರೆಸ್ ಯುವ ಮುಖಂಡ ತೌಸಿಫ್ ಲಕ್ಕುಂಡಿ ಮೇಲೆ‌ ಇಸ್ಮಾಯಿಲ್ ಮತ್ತು ಆತನ‌ ಸಹಚರರು ಭಾನುವಾರ ರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ.

ಘಟನೆ ಸಂಬಂಧ ಬೆಂಡಿಗೇರಿ ಠಾಣೆ ಪೊಲೀಸರು ಈಗಾಗಲೇ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತೌಸಿಫ್ ಇತ್ತೀಚೆಗಷ್ಟೇ ಸೋನಿಯಾಗಾಂಧಿ ನಗರದಲ್ಲಿ ಮನೆ ಮಾಡಿದ್ದರು. ಇಸ್ಲಾಯಿಲ್ ಗುಂಪು ಕಟ್ಟಿಕೊಂಡು ತೌಸಿಫ್ ಮನೆ‌ ಮುಂದೆ ಬಂದು ನಿಲ್ಲುತ್ತಿದ್ದ. ಈ ಬಗ್ಗೆ ಇಬ್ಬರ ಬಗ್ಗೆ ವಾಗ್ವಾದ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ತೌಸಿಫ್ ಕಳೆದ ಪಾಲಿಕೆ‌ ಚುನಾವಣೆಯಲ್ಲಿ ತಿಪ್ಪಣ್ಣ ಮಜ್ಜಗಿ ವಿರುದ್ಧ ಸ್ಪರ್ಧಿಸಿ ಪರಾಭವಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT