ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆರೆಯಲ್ಲಿ ಮುಳುಗಿ ಯುವಕ ಸಾವು    

Last Updated 2 ಅಕ್ಟೋಬರ್ 2020, 16:04 IST
ಅಕ್ಷರ ಗಾತ್ರ

ಕಲಘಟಗಿ: ತಾಲ್ಲೂಕಿನ ಮಾಚಾಪೂರ ಗ್ರಾಮದ ಕ್ಯಾತನಕೆರೆಯಲ್ಲಿ ಮುಳುಗಿಪಟ್ಟಣದ ಗಣೇಶ್ ಗೌಳಿ (22) ಎಂಬ ಯುವಕ ಶುಕ್ರವಾರ ಮೃತಪಟ್ಟಿದ್ದಾನೆ.

ಮಧ್ಯಾಹ್ನ ಸ್ನೇಹಿತರ ಜೊತೆ ಈಜಲು ಹೋಗಿ ಈಜು ಬಾರದೆ ಕೆರೆಯಲ್ಲಿ ಮುಳುಗಿದ್ದಾನೆ ಎಂದು ತಿಳಿದು ಬಂದಿದೆ.ಕೆರೆಯಲ್ಲಿ ಯುವಕ ಮುಳುಗಿರುವ ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾಕಾರ್ಯ ಕೈಗೊಂಡರು. ಎರಡುಗಂಟೆಗಳ ಕಾಲ ತೀವ್ರ ಹುಡುಕಾಟ ನಡೆಸಿ ಯುವಕನ ಮೃತದೇಹ ಹೊರಗೆ ತೆಗೆದಿದ್ದಾರೆ.

ರಕ್ಷಣಾ ಕಾರ್ಯದಲ್ಲಿ ಆನಂದ ಮುದೇನವರ, ಮಾರುತಿ ಹೈಬತ್ತಿ, ಎಂ.ಐ ಕಿತ್ತೂರು, ರಾಜು ಜಾಧವ್, ಉಮೇಶ ತೆಂಬದ ಪಾಲ್ಗೊಂಡಿದ್ದರು.ಯುವಕನ ಮೃತದೇಹ ಪತ್ತೆಯಾಗುತ್ತಿದ್ದಂತೆಯೇಕುಟುಂಬದವರ ಆಕ್ರಂದನ ಮುಗಿಲುಮುಟ್ಟಿತ್ತು. ಮೃತಯುವಕನನ್ನು ನೋಡಲು ಮಾಜಿ ಸಚಿವ ಸಂತೋಷ್ ಲಾಡ್ ಬಂದು ಕುಟುಂಬದವರಿಗೆ ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT