<p><strong>ಕಲಘಟಗಿ</strong>: ಯುವ ಸಮೂಹ ಕ್ರೀಡೆಯಲ್ಲಿ ಭಾಗವಹಿಸಲು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಕ್ಷೇತ್ರವ್ಯಾಪ್ತಿಯಲ್ಲಿ ಕ್ರೀಡಾ ಉತ್ಸವ ಆಯೋಜಿಸಿದ್ದಾರೆ ಎಂದು ಬಿಜೆಪಿ ಮುಖಂಡ ನಾಗರಾಜ ಛಬ್ಬಿ ಹೇಳಿದರು.</p>.<p>ಪಟ್ಟಣದ ಬಿಜೆಪಿ ಪಕ್ಷದ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿ ಕರೆದು ಮಾಹಿತಿ ನೀಡಿದರು.</p>.<p>ಪಟ್ಟಣದ ಹನ್ನೆರಡು ಸಾವಿರ ಮಠದ ಎದುರುಗಡೆಯ ಮೈದಾನದಲ್ಲಿ ಜ.3,4ರಂದು ಎರಡು ದಿನಗಳ ಕಾಲ ಕ್ರೀಡಾ ಉತ್ಸವ ಜರುಗಲಿವೆ.</p>.<p>ಗುಂಪು ಆಟಗಳಾದ ಕಬಡ್ಡಿ, ಕೊಕ್ಕೊ ,ವಾಲಿಬಾಲ್ ಪ್ರಥಮ ಬಹುಮಾನ ₹30 ಸಾವಿರ, ದ್ವಿತೀಯ ₹20 ಸಾವಿರ, ಮೂರು ಹಾಗೂ ನಾಲ್ಕನೇ ತಲಾ ₹10 ಸಾವಿರ ಹಾಗೂ ಆಕರ್ಷಕ ಟ್ರೋಫಿ ಇರಲಿದೆ. ವೈಯಕ್ತಿಕ ಆಟಗಳಾದ 100 ಮೀಟರ್ ಓಟ, 800 ಮೀಟರ್ ಓಟ, ಎತ್ತರ ಜಿಗಿತ, ಉದ್ದ ಜಿಗಿತ, ಗುಂಡು ಎಸೆತಗಳಿಗೆ ಪ್ರಥಮ ₹7 ಸಾವಿರ, ದ್ವಿತೀಯ ₹5 ಸಾವಿರ, ತೃತೀಯ ₹3 ಸಾವಿರ ಹಾಗೂ ಆಕರ್ಷಕ ಮೆಡಲ್ ನೀಡಲಾಗುವುದು ಎಂದರು.</p>.<p>ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷ ನಿಂಗಪ್ಪ ಸುತಗಟ್ಟಿ ಮಾತನಾಡಿ, ಗ್ರಾಮೀಣ ಪ್ರತಿಭೆಗಳು ಕ್ರೀಡಾಕೂಟಗಳಿಂದ ವಂಚಿತರಾಗಬಾರದು ಎನ್ನುವ ದೃಷ್ಟಿಯಿಂದ ಕ್ರೀಡಾ ಉತ್ಸವ ಹಮ್ಮಿಕೊಳ್ಳಲಾಗಿದೆ. ಯುವ ಪ್ರತಿಭೆಗಳು ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಒಳ್ಳೆಯ ವೇದಿಕೆಯಾಗಿದೆ ಎಂದರು.</p>.<p>ಕ್ರೀಡಾ ಉತ್ಸವದ ಕರಪತ್ರಗಳನ್ನ ಆಟದ ಮೈದಾನದಲ್ಲಿ ಬಿಡುಗಡೆಗೊಳಿಸಿದರು. ಆಟಗಾರರಿಗೆ ಸಮವಸ್ತ್ರ ಉಚಿತವಾಗಿ ನೀಡಲಾಗುವುದು ಎಂದು ತಿಳಿಸಿದರು.</p>.<p>ಬಿಜೆಪಿ ತಾಲ್ಲೂಕ ಅಧ್ಯಕ್ಷ ಯಲ್ಲಾರಿ ಶಿಂಧೆ, ಮುಖಂಡರಾದ ಕಿರಣಪಾಟೀಲ್ ಕುಲಕರ್ಣಿ, ಐ.ಸಿ ಗೋಕುಲ, ಬಸವರಾಜ ಶೆರೇವಾಡ, ಮಹಾತೇಶ ತಹಶೀಲ್ದಾರ್, ಅಶೋಕ ಆಡಿನವರ, ಸುರೇಶ ಶೀಲವಂತರ, ಶಿವಲಿಂಗಪ್ಪ ಯಲಿವಾಳ,ಸಂತೋಷ್ ಮಾದನಬಾವಿ, ಪರಶುರಾಮ ರಜಪೂತ, ಶ್ರೀಕಾಂತ್ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಘಟಗಿ</strong>: ಯುವ ಸಮೂಹ ಕ್ರೀಡೆಯಲ್ಲಿ ಭಾಗವಹಿಸಲು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಕ್ಷೇತ್ರವ್ಯಾಪ್ತಿಯಲ್ಲಿ ಕ್ರೀಡಾ ಉತ್ಸವ ಆಯೋಜಿಸಿದ್ದಾರೆ ಎಂದು ಬಿಜೆಪಿ ಮುಖಂಡ ನಾಗರಾಜ ಛಬ್ಬಿ ಹೇಳಿದರು.</p>.<p>ಪಟ್ಟಣದ ಬಿಜೆಪಿ ಪಕ್ಷದ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿ ಕರೆದು ಮಾಹಿತಿ ನೀಡಿದರು.</p>.<p>ಪಟ್ಟಣದ ಹನ್ನೆರಡು ಸಾವಿರ ಮಠದ ಎದುರುಗಡೆಯ ಮೈದಾನದಲ್ಲಿ ಜ.3,4ರಂದು ಎರಡು ದಿನಗಳ ಕಾಲ ಕ್ರೀಡಾ ಉತ್ಸವ ಜರುಗಲಿವೆ.</p>.<p>ಗುಂಪು ಆಟಗಳಾದ ಕಬಡ್ಡಿ, ಕೊಕ್ಕೊ ,ವಾಲಿಬಾಲ್ ಪ್ರಥಮ ಬಹುಮಾನ ₹30 ಸಾವಿರ, ದ್ವಿತೀಯ ₹20 ಸಾವಿರ, ಮೂರು ಹಾಗೂ ನಾಲ್ಕನೇ ತಲಾ ₹10 ಸಾವಿರ ಹಾಗೂ ಆಕರ್ಷಕ ಟ್ರೋಫಿ ಇರಲಿದೆ. ವೈಯಕ್ತಿಕ ಆಟಗಳಾದ 100 ಮೀಟರ್ ಓಟ, 800 ಮೀಟರ್ ಓಟ, ಎತ್ತರ ಜಿಗಿತ, ಉದ್ದ ಜಿಗಿತ, ಗುಂಡು ಎಸೆತಗಳಿಗೆ ಪ್ರಥಮ ₹7 ಸಾವಿರ, ದ್ವಿತೀಯ ₹5 ಸಾವಿರ, ತೃತೀಯ ₹3 ಸಾವಿರ ಹಾಗೂ ಆಕರ್ಷಕ ಮೆಡಲ್ ನೀಡಲಾಗುವುದು ಎಂದರು.</p>.<p>ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷ ನಿಂಗಪ್ಪ ಸುತಗಟ್ಟಿ ಮಾತನಾಡಿ, ಗ್ರಾಮೀಣ ಪ್ರತಿಭೆಗಳು ಕ್ರೀಡಾಕೂಟಗಳಿಂದ ವಂಚಿತರಾಗಬಾರದು ಎನ್ನುವ ದೃಷ್ಟಿಯಿಂದ ಕ್ರೀಡಾ ಉತ್ಸವ ಹಮ್ಮಿಕೊಳ್ಳಲಾಗಿದೆ. ಯುವ ಪ್ರತಿಭೆಗಳು ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಒಳ್ಳೆಯ ವೇದಿಕೆಯಾಗಿದೆ ಎಂದರು.</p>.<p>ಕ್ರೀಡಾ ಉತ್ಸವದ ಕರಪತ್ರಗಳನ್ನ ಆಟದ ಮೈದಾನದಲ್ಲಿ ಬಿಡುಗಡೆಗೊಳಿಸಿದರು. ಆಟಗಾರರಿಗೆ ಸಮವಸ್ತ್ರ ಉಚಿತವಾಗಿ ನೀಡಲಾಗುವುದು ಎಂದು ತಿಳಿಸಿದರು.</p>.<p>ಬಿಜೆಪಿ ತಾಲ್ಲೂಕ ಅಧ್ಯಕ್ಷ ಯಲ್ಲಾರಿ ಶಿಂಧೆ, ಮುಖಂಡರಾದ ಕಿರಣಪಾಟೀಲ್ ಕುಲಕರ್ಣಿ, ಐ.ಸಿ ಗೋಕುಲ, ಬಸವರಾಜ ಶೆರೇವಾಡ, ಮಹಾತೇಶ ತಹಶೀಲ್ದಾರ್, ಅಶೋಕ ಆಡಿನವರ, ಸುರೇಶ ಶೀಲವಂತರ, ಶಿವಲಿಂಗಪ್ಪ ಯಲಿವಾಳ,ಸಂತೋಷ್ ಮಾದನಬಾವಿ, ಪರಶುರಾಮ ರಜಪೂತ, ಶ್ರೀಕಾಂತ್ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>