<p><strong>ಹುಬ್ಬಳ್ಳಿ</strong>: ‘ರಾಜ್ಯದ ಜನರು ಬಿಜೆಪಿಯವರಿಗೆ ಯಾವತ್ತೂ ಬಹುಮತ ನೀಡಿಲ್ಲ. ಆಪರೇಷನ್ ಕಮಲ ಮಾಡಿಯೇ ಅವರು ಅಧಿಕಾರಕ್ಕೆ ಬಂದಿದ್ದು’ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು. </p>.<p>ಸೌದಿ ಅರೇಬಿಯಾದಲ್ಲಿ ಉಮ್ರಾ ಯಾತ್ರೆ ವೇಳೆ ಮದೀನಾದಲ್ಲಿ ನಡೆದ ಬಸ್ ಅಪಘಾತದಲ್ಲಿ ಸಾವನ್ನಪ್ಪಿದ ನಗರದ ಗಣೇಶಪೇಟೆ ನಿವಾಸಿ ಅಬ್ದುಲ್ ಘನಿ ಶಿರಹಟ್ಟಿ ಅವರ ನಿವಾಸಕ್ಕೆ ಗುರುವಾರ ಭೇಟಿ ನೀಡಿ, ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ವೈಯಕ್ತಿಕವಾಗಿ ₹10 ಲಕ್ಷ ಪರಿಹಾರ ನೀಡಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಮುಖ್ಯಮಂತ್ರಿ ಕುರ್ಚಿ ಖಾಲಿ ಇದ್ದಾಗ ಮಾತ್ರ ಸಿಎಂ ಬದಲಾವಣೆ ಬಗ್ಗೆ ಮಾತನಾಡಬೇಕು. ನಮ್ಮದು ಹೈಕಮಾಂಡ್ ಪಕ್ಷವಾಗಿದ್ದು, ಅವರೇ ಈ ವಿಷಯದಲ್ಲಿ ನಿರ್ಣಯ ಕೈಗೊಳ್ಳುತ್ತಾರೆ’ ಎಂದರು.</p>.<p>‘ನಮ್ಮ ಸರ್ಕಾರದ ವತಿಯಿಂದ ಬಡವರಿಗೆ 6ನೇ ಗ್ಯಾರಂಟಿಯಾಗಿ 2 ಲಕ್ಷದ 30 ಸಾವಿರ ಮನೆಗಳನ್ನು ನೀಡಲಾಗುತ್ತಿದೆ. ಜನವರಿ 24ಕ್ಕೆ ಫಲಾನುಭವಿಗಳಿಗೆ ಮನೆಗಳ ಹಸ್ತಾಂತರ ಮಾಡಲಾಗುವುದು. ಕಳೆದ ವರ್ಷ 10 ಜಿಲ್ಲೆಗಳಲ್ಲಿ ₹18 ಸಾವಿರ ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆದಿವೆ’ ಎಂದು ಹೇಳಿದರು.</p>.<p>‘ಅಬ್ದುಲ್ ಘನಿ ಶಿರಹಟ್ಟಿ ಅವರ ಕುಟುಂಬಕ್ಕೆ ವೈಯಕ್ತಿಕವಾಗಿ ₹10ಲಕ್ಷ ಪರಿಹಾರ ಕೊಟ್ಟಿದ್ದೇನೆ. ಸರ್ಕಾರದಿಂದಲೂ ₹5 ಲಕ್ಷ ಪರಿಹಾರ ಕೊಡಿಸಲು ಯತ್ನಿಸುತ್ತೇನೆ. ಅವರಿಗೆ ಒಬ್ಬ ಮಗನಿದ್ದು ಅವರಿಗೆ ನಮ್ಮಲ್ಲಿಯೇ ಕೆಲಸ ಕೊಟ್ಟಿದ್ದೇವೆ’ ಎಂದರು. </p>.<p>ಶಾಸಕ ಪ್ರಸಾದ್ ಅಬ್ಬಯ್ಯ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ರಾಜ್ಯದ ಜನರು ಬಿಜೆಪಿಯವರಿಗೆ ಯಾವತ್ತೂ ಬಹುಮತ ನೀಡಿಲ್ಲ. ಆಪರೇಷನ್ ಕಮಲ ಮಾಡಿಯೇ ಅವರು ಅಧಿಕಾರಕ್ಕೆ ಬಂದಿದ್ದು’ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು. </p>.<p>ಸೌದಿ ಅರೇಬಿಯಾದಲ್ಲಿ ಉಮ್ರಾ ಯಾತ್ರೆ ವೇಳೆ ಮದೀನಾದಲ್ಲಿ ನಡೆದ ಬಸ್ ಅಪಘಾತದಲ್ಲಿ ಸಾವನ್ನಪ್ಪಿದ ನಗರದ ಗಣೇಶಪೇಟೆ ನಿವಾಸಿ ಅಬ್ದುಲ್ ಘನಿ ಶಿರಹಟ್ಟಿ ಅವರ ನಿವಾಸಕ್ಕೆ ಗುರುವಾರ ಭೇಟಿ ನೀಡಿ, ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ವೈಯಕ್ತಿಕವಾಗಿ ₹10 ಲಕ್ಷ ಪರಿಹಾರ ನೀಡಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಮುಖ್ಯಮಂತ್ರಿ ಕುರ್ಚಿ ಖಾಲಿ ಇದ್ದಾಗ ಮಾತ್ರ ಸಿಎಂ ಬದಲಾವಣೆ ಬಗ್ಗೆ ಮಾತನಾಡಬೇಕು. ನಮ್ಮದು ಹೈಕಮಾಂಡ್ ಪಕ್ಷವಾಗಿದ್ದು, ಅವರೇ ಈ ವಿಷಯದಲ್ಲಿ ನಿರ್ಣಯ ಕೈಗೊಳ್ಳುತ್ತಾರೆ’ ಎಂದರು.</p>.<p>‘ನಮ್ಮ ಸರ್ಕಾರದ ವತಿಯಿಂದ ಬಡವರಿಗೆ 6ನೇ ಗ್ಯಾರಂಟಿಯಾಗಿ 2 ಲಕ್ಷದ 30 ಸಾವಿರ ಮನೆಗಳನ್ನು ನೀಡಲಾಗುತ್ತಿದೆ. ಜನವರಿ 24ಕ್ಕೆ ಫಲಾನುಭವಿಗಳಿಗೆ ಮನೆಗಳ ಹಸ್ತಾಂತರ ಮಾಡಲಾಗುವುದು. ಕಳೆದ ವರ್ಷ 10 ಜಿಲ್ಲೆಗಳಲ್ಲಿ ₹18 ಸಾವಿರ ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆದಿವೆ’ ಎಂದು ಹೇಳಿದರು.</p>.<p>‘ಅಬ್ದುಲ್ ಘನಿ ಶಿರಹಟ್ಟಿ ಅವರ ಕುಟುಂಬಕ್ಕೆ ವೈಯಕ್ತಿಕವಾಗಿ ₹10ಲಕ್ಷ ಪರಿಹಾರ ಕೊಟ್ಟಿದ್ದೇನೆ. ಸರ್ಕಾರದಿಂದಲೂ ₹5 ಲಕ್ಷ ಪರಿಹಾರ ಕೊಡಿಸಲು ಯತ್ನಿಸುತ್ತೇನೆ. ಅವರಿಗೆ ಒಬ್ಬ ಮಗನಿದ್ದು ಅವರಿಗೆ ನಮ್ಮಲ್ಲಿಯೇ ಕೆಲಸ ಕೊಟ್ಟಿದ್ದೇವೆ’ ಎಂದರು. </p>.<p>ಶಾಸಕ ಪ್ರಸಾದ್ ಅಬ್ಬಯ್ಯ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>