<p><strong>ಧಾರವಾಡ: </strong>ಜಿಲ್ಲಾ ಉತ್ಸವದಲ್ಲಿ ಅಶ್ಲೀಲ ನೃತ್ಯಕ್ಕೆ ಅವಕಾಶ ನೀಡುವ ಮೂಲಕ ಜಿಲ್ಲಾಧಿಕಾರಿಗಳು ಈ ನಾಡಿನ ಸಂಸ್ಕೃತಿಕ ಅಪಮಾನ ಮಾಡಿದ್ದಾರೆ. ಆದ್ದರಿಂದ ಅವರನ್ನು ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.<br /> <br /> ಸಂಘಟನೆಯ ಜಿಲ್ಲಾ ಅಧ್ಯಕ್ಷ ರಮೇಶ ಬದ್ನೂರ ಮಾತನಾಡಿ, ‘ಮೂರು ದಿನಗಳ ಕಾಲ ನಡೆದ ಜಿಲ್ಲಾ ಉತ್ಸವದಲ್ಲಿ ಜಿಲ್ಲಾಧಿಕಾರಿ ದೇಸಿ ಕಲೆ ಮತ್ತು ಸಂಸ್ಕೃತಿಗೆ ಅಪಮಾನವೆಸಗಿ ವಿದೇಶಿ ಸಂಸ್ಕೃತಿಗೆ ರತ್ನಗಂಬಳಿ ಹಾಸಿ ಬರಮಾಡಿಕೊಂಡಿದ್ದಾರೆ. ಈ ನಾಡಿನ ಸಂಸ್ಕೃತಿಯನ್ನು ಉಳಿಸಿ, ಬೆಳೆಸಲು ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯನ್ನು ಹೊಂದಿದೆ.<br /> <br /> ಆದರೆ, ಇಲಾಖೆಯ ಅಧಿಕಾರಿಗಳು ತಮ್ಮ ಧ್ಯೇಯೋದ್ದೇಶಗಳನ್ನು ಮರೆತು ಉತ್ಸವದಲ್ಲಿ ದೇಸಿ ಕಲೆಗಳಾದ ಜಾನಪದ, ಸುಗಮ ಸಂಗೀತ, ಭರತನಾಟ್ಯ, ದೊಡ್ಡಾಟ ಇವುಗಳಿಗೆ ಹೆಚ್ಚು ಆದ್ಯತೆ ನೀಡದೇ ಹಾಗೂ ಆ ಎಲ್ಲಾ ಕಲಾವಿದರಿಗೆ ಅತೀ ಕನಿಷ್ಟ ಸಂಭಾವನೆ ನೀಡುವ ಮೂಲಕ ಕಲಾವಿದರಿಗೆ ಅಪಮಾನವೆಸಗಿದ್ದಾರೆ. ಸ್ಥಳೀಯ ಕಲಾವಿದರನ್ನು ಎಲ್ಲಾ ರೀತಿಯಿಂದಲೂ ಕೆಟ್ಟದಾಗಿ ನಡೆಸಿಕೊಂಡಿದ್ದಾರೆ. ಎಂದು ಆರೋಪಿಸಿದರು.<br /> <br /> ಜಿಲ್ಲಾ ಉತ್ಸವದಲ್ಲಿ ಈ ನಾಡಿನ ಸಂಸ್ಕೃತಿಗೆ ಅಪಮಾನವೆಸಗುವಂತಹ ಅರೆಬರೆ ಬಟ್ಟೆತೊಟ್ಟ ಹುಡುಗಿಯರ ಅಶ್ಲೀಲ ನೃತ್ಯಕ್ಕೆ ಅವಕಾಶ ಕಲ್ಪಿಸುವ ಮೂಲಕ ಧಾರವಾಡದ ಸಾಂಸ್ಕೃತಿಕ ವಾತಾವರಣಕ್ಕೆ ಕಪ್ಪುಚುಕ್ಕೆ ಹಚ್ಚಿದ್ದಾರೆ. ನಗರದ ಸಾಂಸ್ಕೃತಿಕ ಪರಂಪರೆಗ ಧಕ್ಕೆ ತಂದಿದ್ದಾರೆ. ಆದ್ದರಿಂದ ಜಿಲ್ಲಾಧಿಕಾರಿಯನ್ನು ಬೇರೆ ಕಡೆ ವರ್ಗಾವಣೆ ಮಾಡಬೇಕು ಎಂದು ಒತ್ತಾಯ ಮಾಡಿದರು.<br /> <br /> ಅಷ್ಟೇ ಅಲ್ಲದೇ, ಕರ್ನಾಟಕ ಕಾಲೇಜು ಮೈದಾನದಲ್ಲಿ ಬಂದೋಬಸ್ತ್ಗೆ ನಿಂತಿದ್ದ ವಿದ್ಯಾಗಿರಿ ಠಾಣೆ ಸಿಪಿಐ ಟಿ. ಚನ್ನಕೇಶವ ನಾಡಿನ ಸಾಹಿತಿಗಳೊಂದಿಗೆ, ಮಾಧ್ಯಮದವರೊಂದಿಗೆ ಹಾಗೂ ಕನ್ನಡಪರ ಸಂಘಟನೆಗಳ ಕಾರ್ಯಕರ್ತರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಅವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.<br /> <br /> ಈ ಸಂದರ್ಭದಲ್ಲಿ ಕಾರ್ಯಕರ್ತರು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಮೂಲಕ ಮುಖ್ಯಮಂತ್ರಿಗೆ ಮನವಿ<br /> ಸಲ್ಲಿಸಿದರು.<br /> <br /> ಕಾರ್ಯಕರ್ತರಾದ ಶಿವಸೋಮಣ್ಣ ನಿಟ್ಟೂರ, ಕುಮಾರ ಪಾಟೀಲ, ನಾಶೀರ್ ಖಾಜಿ, ವಸಂತ ನಾಯ್ಕ, ರುದ್ರೇಶ ಹವಳದ, ಪರಮೇಶಿ ರೇವಡಿಹಾಳ, ಜುಬೇರ, ನಾಗರಾಜ ದುದಾನಿ, ಅರ್ಜುನ ವಡ್ಡರ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ: </strong>ಜಿಲ್ಲಾ ಉತ್ಸವದಲ್ಲಿ ಅಶ್ಲೀಲ ನೃತ್ಯಕ್ಕೆ ಅವಕಾಶ ನೀಡುವ ಮೂಲಕ ಜಿಲ್ಲಾಧಿಕಾರಿಗಳು ಈ ನಾಡಿನ ಸಂಸ್ಕೃತಿಕ ಅಪಮಾನ ಮಾಡಿದ್ದಾರೆ. ಆದ್ದರಿಂದ ಅವರನ್ನು ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.<br /> <br /> ಸಂಘಟನೆಯ ಜಿಲ್ಲಾ ಅಧ್ಯಕ್ಷ ರಮೇಶ ಬದ್ನೂರ ಮಾತನಾಡಿ, ‘ಮೂರು ದಿನಗಳ ಕಾಲ ನಡೆದ ಜಿಲ್ಲಾ ಉತ್ಸವದಲ್ಲಿ ಜಿಲ್ಲಾಧಿಕಾರಿ ದೇಸಿ ಕಲೆ ಮತ್ತು ಸಂಸ್ಕೃತಿಗೆ ಅಪಮಾನವೆಸಗಿ ವಿದೇಶಿ ಸಂಸ್ಕೃತಿಗೆ ರತ್ನಗಂಬಳಿ ಹಾಸಿ ಬರಮಾಡಿಕೊಂಡಿದ್ದಾರೆ. ಈ ನಾಡಿನ ಸಂಸ್ಕೃತಿಯನ್ನು ಉಳಿಸಿ, ಬೆಳೆಸಲು ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯನ್ನು ಹೊಂದಿದೆ.<br /> <br /> ಆದರೆ, ಇಲಾಖೆಯ ಅಧಿಕಾರಿಗಳು ತಮ್ಮ ಧ್ಯೇಯೋದ್ದೇಶಗಳನ್ನು ಮರೆತು ಉತ್ಸವದಲ್ಲಿ ದೇಸಿ ಕಲೆಗಳಾದ ಜಾನಪದ, ಸುಗಮ ಸಂಗೀತ, ಭರತನಾಟ್ಯ, ದೊಡ್ಡಾಟ ಇವುಗಳಿಗೆ ಹೆಚ್ಚು ಆದ್ಯತೆ ನೀಡದೇ ಹಾಗೂ ಆ ಎಲ್ಲಾ ಕಲಾವಿದರಿಗೆ ಅತೀ ಕನಿಷ್ಟ ಸಂಭಾವನೆ ನೀಡುವ ಮೂಲಕ ಕಲಾವಿದರಿಗೆ ಅಪಮಾನವೆಸಗಿದ್ದಾರೆ. ಸ್ಥಳೀಯ ಕಲಾವಿದರನ್ನು ಎಲ್ಲಾ ರೀತಿಯಿಂದಲೂ ಕೆಟ್ಟದಾಗಿ ನಡೆಸಿಕೊಂಡಿದ್ದಾರೆ. ಎಂದು ಆರೋಪಿಸಿದರು.<br /> <br /> ಜಿಲ್ಲಾ ಉತ್ಸವದಲ್ಲಿ ಈ ನಾಡಿನ ಸಂಸ್ಕೃತಿಗೆ ಅಪಮಾನವೆಸಗುವಂತಹ ಅರೆಬರೆ ಬಟ್ಟೆತೊಟ್ಟ ಹುಡುಗಿಯರ ಅಶ್ಲೀಲ ನೃತ್ಯಕ್ಕೆ ಅವಕಾಶ ಕಲ್ಪಿಸುವ ಮೂಲಕ ಧಾರವಾಡದ ಸಾಂಸ್ಕೃತಿಕ ವಾತಾವರಣಕ್ಕೆ ಕಪ್ಪುಚುಕ್ಕೆ ಹಚ್ಚಿದ್ದಾರೆ. ನಗರದ ಸಾಂಸ್ಕೃತಿಕ ಪರಂಪರೆಗ ಧಕ್ಕೆ ತಂದಿದ್ದಾರೆ. ಆದ್ದರಿಂದ ಜಿಲ್ಲಾಧಿಕಾರಿಯನ್ನು ಬೇರೆ ಕಡೆ ವರ್ಗಾವಣೆ ಮಾಡಬೇಕು ಎಂದು ಒತ್ತಾಯ ಮಾಡಿದರು.<br /> <br /> ಅಷ್ಟೇ ಅಲ್ಲದೇ, ಕರ್ನಾಟಕ ಕಾಲೇಜು ಮೈದಾನದಲ್ಲಿ ಬಂದೋಬಸ್ತ್ಗೆ ನಿಂತಿದ್ದ ವಿದ್ಯಾಗಿರಿ ಠಾಣೆ ಸಿಪಿಐ ಟಿ. ಚನ್ನಕೇಶವ ನಾಡಿನ ಸಾಹಿತಿಗಳೊಂದಿಗೆ, ಮಾಧ್ಯಮದವರೊಂದಿಗೆ ಹಾಗೂ ಕನ್ನಡಪರ ಸಂಘಟನೆಗಳ ಕಾರ್ಯಕರ್ತರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಅವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.<br /> <br /> ಈ ಸಂದರ್ಭದಲ್ಲಿ ಕಾರ್ಯಕರ್ತರು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಮೂಲಕ ಮುಖ್ಯಮಂತ್ರಿಗೆ ಮನವಿ<br /> ಸಲ್ಲಿಸಿದರು.<br /> <br /> ಕಾರ್ಯಕರ್ತರಾದ ಶಿವಸೋಮಣ್ಣ ನಿಟ್ಟೂರ, ಕುಮಾರ ಪಾಟೀಲ, ನಾಶೀರ್ ಖಾಜಿ, ವಸಂತ ನಾಯ್ಕ, ರುದ್ರೇಶ ಹವಳದ, ಪರಮೇಶಿ ರೇವಡಿಹಾಳ, ಜುಬೇರ, ನಾಗರಾಜ ದುದಾನಿ, ಅರ್ಜುನ ವಡ್ಡರ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>