<p><strong>ಹುಬ್ಬಳ್ಳಿ:</strong> ಪಕ್ಷದ ಬಲವರ್ಧನೆಗೆ ಮತ್ತು ರಾಜಕೀಯವನ್ನು ಶುಭ್ರಗೊ ಳಿಸಲು ಪಕ್ಷದ ಕಾರ್ಯಕರ್ತರು ಒಂದಾಗಿ ಶ್ರಮಿಸಬೇಕು ಎಂದು ಎನ್ಸಿಪಿ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಅಶೋಕ ಜವಳಿ ಸಲಹೆ ನೀಡಿದರು.</p>.<p>ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ 14ನೇ ವರ್ಷದ ಸಂಸ್ಥಾಪನಾ ದಿನಾ ಚರಣೆ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಅವರು ಮಾತ ನಾಡಿದರು.</p>.<p>ಶೀಘ್ರದಲ್ಲಿ ಬಿಜೆಪಿ ಸರ್ಕಾರ ಪತನ ಗೊಳ್ಳಲಿದ್ದು, ಯಾವ ಕ್ಷಣದಲ್ಲಾದರೂ ಚುನಾವಣೆ ಘೋಷಣೆ ಆಗಬಹುದು. ಚುನಾವಣೆ ಕಾರ್ಯಕರ್ತರು ಸಿದ್ಧರಾಗಬೇಕೆಂದರು.</p>.<p>ನಂತರ ಪಕ್ಷದ ಕಾರ್ಯಕರ್ತರು ನಗರದ ಮದರ್ ಥೆರೆಸಾ ಆಶ್ರಮಕ್ಕೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳಿಗೆ ಹಣ್ಣು ವಿತರಿಸಿದರು.</p>.<p>ರಾಜ್ಯ ಘಟಕದ ಉಪಾಧ್ಯಕ್ಷ ಸಿ.ವಿ. ಜೇಮ್ಸಕುಮಾರ, ಎ.ಆರ್. ಕ್ಲ್ಲಿಲೇ ದಾರ, ಕಾರ್ಯದರ್ಶಿ ಎಂ.ಕೆ. ಮಕ್ಕುಬಾಯಿ, ರೇಣುಕಾ ಶಿಂಧೆ, ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಮಹೇಶ ತಳಕಲ್ಲಮಠ ಹಾಗೂ ವಿ.ಜಿ. ಬುಳ್ಳಾನವರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಪಕ್ಷದ ಬಲವರ್ಧನೆಗೆ ಮತ್ತು ರಾಜಕೀಯವನ್ನು ಶುಭ್ರಗೊ ಳಿಸಲು ಪಕ್ಷದ ಕಾರ್ಯಕರ್ತರು ಒಂದಾಗಿ ಶ್ರಮಿಸಬೇಕು ಎಂದು ಎನ್ಸಿಪಿ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಅಶೋಕ ಜವಳಿ ಸಲಹೆ ನೀಡಿದರು.</p>.<p>ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ 14ನೇ ವರ್ಷದ ಸಂಸ್ಥಾಪನಾ ದಿನಾ ಚರಣೆ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಅವರು ಮಾತ ನಾಡಿದರು.</p>.<p>ಶೀಘ್ರದಲ್ಲಿ ಬಿಜೆಪಿ ಸರ್ಕಾರ ಪತನ ಗೊಳ್ಳಲಿದ್ದು, ಯಾವ ಕ್ಷಣದಲ್ಲಾದರೂ ಚುನಾವಣೆ ಘೋಷಣೆ ಆಗಬಹುದು. ಚುನಾವಣೆ ಕಾರ್ಯಕರ್ತರು ಸಿದ್ಧರಾಗಬೇಕೆಂದರು.</p>.<p>ನಂತರ ಪಕ್ಷದ ಕಾರ್ಯಕರ್ತರು ನಗರದ ಮದರ್ ಥೆರೆಸಾ ಆಶ್ರಮಕ್ಕೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳಿಗೆ ಹಣ್ಣು ವಿತರಿಸಿದರು.</p>.<p>ರಾಜ್ಯ ಘಟಕದ ಉಪಾಧ್ಯಕ್ಷ ಸಿ.ವಿ. ಜೇಮ್ಸಕುಮಾರ, ಎ.ಆರ್. ಕ್ಲ್ಲಿಲೇ ದಾರ, ಕಾರ್ಯದರ್ಶಿ ಎಂ.ಕೆ. ಮಕ್ಕುಬಾಯಿ, ರೇಣುಕಾ ಶಿಂಧೆ, ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಮಹೇಶ ತಳಕಲ್ಲಮಠ ಹಾಗೂ ವಿ.ಜಿ. ಬುಳ್ಳಾನವರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>