<p><strong>ಧಾರವಾಡ:</strong> ಕಂಚಿನ ಕಂಠದ ಗಾಯಕ, ಗ್ವಾಲಿಯರ್ ಹಾಗೂ ಕಿರಾಣಾ ಘರಾಣಾದ ಸಮ್ಮಿಲನ, ವೈವಿಧ್ಯಮಯ ತಾನ್ಗಳ ಪ್ರಸ್ತುತಪಡಿಸುವ ಹಿರಿಯ ಗಾಯಕ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪಂಡಿತ ಎಂ.ವೆಂಕಟೇಶಕುಮಾರ್ ಅವರಿಗೆ ಇಲ್ಲಿ ಅಭಿನಂದಿಸಲಾಯಿತು. <br /> <br /> ಜಿ.ಬಿ.ಜೋಶಿ ಮೆಮೋರಿಯಲ್ ಟ್ರಸ್ಟ್ ಮತ್ತು ಭಾರತೀಯ ಸಂಗೀತ ವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಗುರುವಾರ ಇಲ್ಲಿನ ಸೃಜನಾ ರಂಗ ಮಂದಿರದಲ್ಲಿ ನಡೆದ ಸಮಾರಂಭದಲ್ಲಿ ವೆಂಕಟೇಶಕುಮಾರ್ ಅವರನ್ನು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಗಿರೀಶ ಕಾರ್ನಾಡ ಸನ್ಮಾನಿಸಿದರು.<br /> <br /> ಉತ್ತರ ಕರ್ನಾಟಕದ ಜನ ಗಾನ ಸುಧೆಯಿಂದ ಬೆಳೆದವರಾಗಿದ್ದಾರೆ. ಪ್ರಖ್ಯಾತ ಕಲಾವಿದ ಹಾಗೂ ಸಂಗೀತ ಗಾರರನ್ನು ನಾಡಿಗೆ, ರಾಷ್ಟ್ರಕ್ಕೆ ನೀಡಿದ ಕೀರ್ತಿ ಧಾರವಾಡದ್ದಾಗಿದೆ ಎಂದು ಡಾ. ಗಿರೀಶ ಕಾರ್ನಾಡ ಅವರು ಹೇಳಿದರು.<br /> <br /> ಜಿಲ್ಲಾಧಿಕಾರಿ ದರ್ಪಣ ಜೈನ್ ಅಧ್ಯಕ್ಷತೆ ವಹಿಸಿದ್ದರು. ಹಮೀದ್ಖಾನ್ ವೇದಿಕೆಯಲ್ಲಿದ್ದರು. ಡಾ. ರಮಾಕಾಂತ ಜೋಶಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಶಶಿಧರ ನರೇಂದ್ರ ನಿರೂಪಿಸಿದರು. ಡಾ. ಹ.ವೆಂ.ಕಾಖಂಡಕಿ ವಂದಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ಕಂಚಿನ ಕಂಠದ ಗಾಯಕ, ಗ್ವಾಲಿಯರ್ ಹಾಗೂ ಕಿರಾಣಾ ಘರಾಣಾದ ಸಮ್ಮಿಲನ, ವೈವಿಧ್ಯಮಯ ತಾನ್ಗಳ ಪ್ರಸ್ತುತಪಡಿಸುವ ಹಿರಿಯ ಗಾಯಕ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪಂಡಿತ ಎಂ.ವೆಂಕಟೇಶಕುಮಾರ್ ಅವರಿಗೆ ಇಲ್ಲಿ ಅಭಿನಂದಿಸಲಾಯಿತು. <br /> <br /> ಜಿ.ಬಿ.ಜೋಶಿ ಮೆಮೋರಿಯಲ್ ಟ್ರಸ್ಟ್ ಮತ್ತು ಭಾರತೀಯ ಸಂಗೀತ ವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಗುರುವಾರ ಇಲ್ಲಿನ ಸೃಜನಾ ರಂಗ ಮಂದಿರದಲ್ಲಿ ನಡೆದ ಸಮಾರಂಭದಲ್ಲಿ ವೆಂಕಟೇಶಕುಮಾರ್ ಅವರನ್ನು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಗಿರೀಶ ಕಾರ್ನಾಡ ಸನ್ಮಾನಿಸಿದರು.<br /> <br /> ಉತ್ತರ ಕರ್ನಾಟಕದ ಜನ ಗಾನ ಸುಧೆಯಿಂದ ಬೆಳೆದವರಾಗಿದ್ದಾರೆ. ಪ್ರಖ್ಯಾತ ಕಲಾವಿದ ಹಾಗೂ ಸಂಗೀತ ಗಾರರನ್ನು ನಾಡಿಗೆ, ರಾಷ್ಟ್ರಕ್ಕೆ ನೀಡಿದ ಕೀರ್ತಿ ಧಾರವಾಡದ್ದಾಗಿದೆ ಎಂದು ಡಾ. ಗಿರೀಶ ಕಾರ್ನಾಡ ಅವರು ಹೇಳಿದರು.<br /> <br /> ಜಿಲ್ಲಾಧಿಕಾರಿ ದರ್ಪಣ ಜೈನ್ ಅಧ್ಯಕ್ಷತೆ ವಹಿಸಿದ್ದರು. ಹಮೀದ್ಖಾನ್ ವೇದಿಕೆಯಲ್ಲಿದ್ದರು. ಡಾ. ರಮಾಕಾಂತ ಜೋಶಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಶಶಿಧರ ನರೇಂದ್ರ ನಿರೂಪಿಸಿದರು. ಡಾ. ಹ.ವೆಂ.ಕಾಖಂಡಕಿ ವಂದಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>