<p><strong>ಧಾರವಾಡ:</strong> ನಗರದ ಕರ್ನಾಟಕ ವಿಶ್ವವಿದ್ಯಾಲಯದ ಸ್ನಾತಕೋತ್ತರ ಸಂಗೀತ ಮತ್ತು ಲಲಿತ ಕಲಾ ವಿಭಾಗದ ಡಾ.ಗಂಗೂಬಾಯಿ ಹಾನಗಲ್ ಪೀಠದ ವತಿಯಿಂದ ಶನಿವಾರ, ಡಾ.ಗಂಗೂಬಾಯಿ ಹಾನಗಲ್ ಅವರ ಮೂರನೇ ವರ್ಷದ ಪುಣ್ಯತಿಥಿಯನ್ನು ಆಚರಿಸಲಾಯಿತು.</p>.<p>ಹಣಕಾಸು ಅಧಿಕಾರಿ ಡಾ.ರಾಜಶ್ರೀ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮನೋಜ ಹಾನಗಲ್ ಸಂಗೀತದ ಪೋಷಣೆಯ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು. ವಿಶ್ವವಿದ್ಯಾಲಯದ ಕುಲಸಚಿವ ಡಾ.ಎಸ್.ಬಿ.ಹಿಂಚಿಗೇರಿ, `ಕೇವಲ ಪುಣ್ಯತಿಥಿಯಲ್ಲದೇ ಪ್ರತಿದಿನವೂ ಸಂಗೀತ ಕಾರ್ಯಕ್ರಮವನ್ನು ನಡೆಸುವಂತಾಗಬೇಕು~ ಎಂದರು. ವಿಭಾಗದ ಮುಖ್ಯಸ್ಥ ಡಾ.ಮೃತ್ಯುಂಜಯ ಅಗಡಿ ಡಾ.ಗಂಗೂಬಾಯಿ ಹಾನಗಲ್ ಅವರ ಸಂಗೀತ ಕ್ಷೇತ್ರದ ಸಾಧನೆ ಹಾಗೂ ಕೊಡುಗೆಯ ಬಗ್ಗೆ ಮಾತನಾಡಿದರು.</p>.<p>ನಂತರ ಅರಣ್ಯಕುಮಾರ ಮುನ್ನೇನಿ ಸಿತಾರವಾದನದಲ್ಲಿ ರಾಗ ನಟ್ಭೈರವ್ ಮತ್ತು ಮಿಶ್ರಮಾಂಡ ದುನ್ಗಳನ್ನು ಪ್ರಸ್ತುತಪಡಿಸಿದರು. ದುಂಡಯ್ಯ ಸ್ವಾಮಿ ತಬಲಾ ಸಾಥ್ ನೀಡಿದ್ದರು.</p>.<p>ಪಂ.ವೆಂಕಟೇಶಕುಮಾರ, ಡಾ.ಎಂ.ಎಸ್.ತರ್ಲಗಟ್ಟಿ, ಡಾ.ಹಮೀದಖಾನ್, ಡಾ.ಆರ್.ಎಸ್.ಹಿರೇಮಠ, ಡಾ.ಶಾಂತಾರಾಮ ಹೆಗಡೆ, ಡಾ.ವೀರಣ್ಣ ರಾಜೂರ, ಡಾ.ವಿ.ಆರ್.ಹೂಗಾರ, ಡಾ.ಮೀರಾ ಗುಂಡಿ ಇದ್ದರು. ಹರೀಶ ಹೆಗಡೆ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ನಗರದ ಕರ್ನಾಟಕ ವಿಶ್ವವಿದ್ಯಾಲಯದ ಸ್ನಾತಕೋತ್ತರ ಸಂಗೀತ ಮತ್ತು ಲಲಿತ ಕಲಾ ವಿಭಾಗದ ಡಾ.ಗಂಗೂಬಾಯಿ ಹಾನಗಲ್ ಪೀಠದ ವತಿಯಿಂದ ಶನಿವಾರ, ಡಾ.ಗಂಗೂಬಾಯಿ ಹಾನಗಲ್ ಅವರ ಮೂರನೇ ವರ್ಷದ ಪುಣ್ಯತಿಥಿಯನ್ನು ಆಚರಿಸಲಾಯಿತು.</p>.<p>ಹಣಕಾಸು ಅಧಿಕಾರಿ ಡಾ.ರಾಜಶ್ರೀ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮನೋಜ ಹಾನಗಲ್ ಸಂಗೀತದ ಪೋಷಣೆಯ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು. ವಿಶ್ವವಿದ್ಯಾಲಯದ ಕುಲಸಚಿವ ಡಾ.ಎಸ್.ಬಿ.ಹಿಂಚಿಗೇರಿ, `ಕೇವಲ ಪುಣ್ಯತಿಥಿಯಲ್ಲದೇ ಪ್ರತಿದಿನವೂ ಸಂಗೀತ ಕಾರ್ಯಕ್ರಮವನ್ನು ನಡೆಸುವಂತಾಗಬೇಕು~ ಎಂದರು. ವಿಭಾಗದ ಮುಖ್ಯಸ್ಥ ಡಾ.ಮೃತ್ಯುಂಜಯ ಅಗಡಿ ಡಾ.ಗಂಗೂಬಾಯಿ ಹಾನಗಲ್ ಅವರ ಸಂಗೀತ ಕ್ಷೇತ್ರದ ಸಾಧನೆ ಹಾಗೂ ಕೊಡುಗೆಯ ಬಗ್ಗೆ ಮಾತನಾಡಿದರು.</p>.<p>ನಂತರ ಅರಣ್ಯಕುಮಾರ ಮುನ್ನೇನಿ ಸಿತಾರವಾದನದಲ್ಲಿ ರಾಗ ನಟ್ಭೈರವ್ ಮತ್ತು ಮಿಶ್ರಮಾಂಡ ದುನ್ಗಳನ್ನು ಪ್ರಸ್ತುತಪಡಿಸಿದರು. ದುಂಡಯ್ಯ ಸ್ವಾಮಿ ತಬಲಾ ಸಾಥ್ ನೀಡಿದ್ದರು.</p>.<p>ಪಂ.ವೆಂಕಟೇಶಕುಮಾರ, ಡಾ.ಎಂ.ಎಸ್.ತರ್ಲಗಟ್ಟಿ, ಡಾ.ಹಮೀದಖಾನ್, ಡಾ.ಆರ್.ಎಸ್.ಹಿರೇಮಠ, ಡಾ.ಶಾಂತಾರಾಮ ಹೆಗಡೆ, ಡಾ.ವೀರಣ್ಣ ರಾಜೂರ, ಡಾ.ವಿ.ಆರ್.ಹೂಗಾರ, ಡಾ.ಮೀರಾ ಗುಂಡಿ ಇದ್ದರು. ಹರೀಶ ಹೆಗಡೆ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>