ಪಾಲಿಕೆ ಸದಸ್ಯ ಸಂಜಯ ಕಪಟಕರ ಮಾತನಾಡಿ, ‘ಮಾಳಮಡ್ಡಿ, ಯುಬಿ ಹಿಲ್ ಸೇರಿದಂತೆ ಕಲ್ಯಾಣನಗರ ಕಡೆಗಳಲ್ಲಿನ ನೀರು ಕೇಶವನಗರ ನಾಲಾ ಮೂಲಕ ಹರಿಯುತ್ತದೆ. ಮಳೆಗಾಲದಲ್ಲಿ ನೀರಿನ ಹರಿವು ಹೆಚ್ಚಾಗಿ ಅವಾಂತರ ಸೃಷ್ಟಿಯಾಗುತ್ತಿದೆ. ಇದನ್ನು ಸರಿಪಡಿಸುವಂತೆ ಹಲವು ಬಾರಿ ಹೇಳಿದರೂ ಸಹ ಅಧಿಕಾರಿಗಳು ಮಾತ್ರ ಲಕ್ಷ್ಯ ವಹಿಸುತ್ತಿಲ್ಲ’ ಎಂದು ದೂರಿದರು.