ಶಾಸಕ ಜಗದೀಶ ಶೆಟ್ಟರ್ ಮಾತನಾಡಿ, ನೂತನ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಬಸವರಾಜ ಹೊರಟ್ಟಿ, ಸಿ.ಎಸ್.ಶಿವಳ್ಳಿ, ಪ್ರಸಾದ ಅಬ್ಬಯ ಸೇರಿದಂತೆ ಮೂವರಲ್ಲಿ ಯಾರಾದರೊಬ್ಬರು ಜಿಲ್ಲಾ ಉಸ್ತುವಾರಿ ಸಚಿವರಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು. ಕೆಸಿಸಿಐ ಅಧ್ಯಕ್ಷ ವಿ.ಪಿ.ಲಿಂಗನಗೌಡ, ಉಪಾಧ್ಯಕ್ಷ ಜಿ.ಕೆ.ಆದಪ್ಪಗೌಡ, ಗೌರವ ಕಾರ್ಯದರ್ಶಿ ವಿನಯ ಜವಳಿ, ರಮೇಶ ಪಾಟೀಲ, ಮೋಹನ ಲಿಂಬಿಕಾಯಿ ಇದ್ದರು.