ನವಲಗುಂದ: ಮನೆಯಲ್ಲಿ ಮಲಗಿದ ವ್ಯಕ್ತಿಯನ್ನು ಮಾರಾಕಸ್ತ್ರಗಳಿಂದ ಹೊಡೆದು ಕೊಲೆ ಮಾಡಿರುವ ಘಟನೆ ಧಾರವಾಡ ಜಿಲ್ಲೆ ನವಲಗುಂದ ತಾಲ್ಲೂಕು ಕಡದಳ್ಳಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ಬಸಪ್ಪ ಭೀಮಪ್ಪ ಕರೀಕಟ್ಟಿ (40) ಕೊಲೆಯಾದ ವ್ಯಕ್ತಿ. ಅಪರಿಚಿತರಿಂದ ಕೊಲೆ ನಡೆದಿದೆ ಎಂದು ಶಂಕಿಸಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.
ಕೊಲೆ ಮಾಡಲು ಬಂದವರಿಗೆ ಅಡ್ಡ ಬಂದ ಮೃತನ ಹೆಂಡತಿಗೆ ಚಾಕು ಇರಿದು ದುಷ್ಕರ್ಮಿಗಳು ಪರಾರಿ ಯಾಗಿದ್ದಾರೆ.
ರೇಣವ್ವ ಚಾಕು ಇರಿತಕ್ಕೊಳಗಾದ ಮಹಿಳೆ. ಗಾಯಾಳುವನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆಯಾಗಿದೆ.