ಪಾಲಿಕೆ ಆವರಣದಲ್ಲಿ ಶುಕ್ರವಾರ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ನಡೆದ ಭಜನೆಯಲ್ಲಿ ಬಿಜೆಪಿ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ನಾಗೇಶ ಕಲಬುರ್ಗಿ, ಪಾಲಿಕೆ ಸದಸ್ಯರಾದ ವೀರಣ್ಣ ಸವಡಿ, ಸ್ಮಿತಾ ಜಾಧವ, ಮಹೇಶ ಬುರ್ಲಿ, ಶಿವಾನಂದ ಮುತ್ತಣ್ಣವರ, ಮೇನಕಾ ಹುರಳಿ, ಶಿವು ಮೆಣಸಿನಕಾಯಿ ಸೇರಿದಂತೆ ಹಲವು ಸದಸ್ಯರು ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು.