ಧಾರವಾಡ: ಪ್ರಸಕ್ತ ಸಾಲಿನ ರಾಷ್ಟ್ರೀಯ ನಾರಿಶಕ್ತಿ ಪುರಸ್ಕಾರ ಪ್ರಶಸ್ತಿಗಾಗಿ ಅರ್ಹ ವ್ಯಕ್ತಿ ಮತ್ತು ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದೆ. ವ್ಯಕ್ತಿ ಮತ್ತು ಸಂಸ್ಥೆಯ ಕಾರ್ಯಕ್ಷೇತ್ರದ ಮೇಲೆ ನೀಡಲಾಗುವ ರಾಣಿ ರುದ್ರಮ್ಮದೇವಿ, ಮಾತಾ ಜೀಜಾಬಾಯಿ, ಕನ್ನಗಿದೇವಿ, ದೇವಿ ಅಹಲಯಾಬಾಯಿ ಹೋಳ್ಕರ್, ರಾಣಿ ಲಕ್ಷ್ಮಿಬಾಯಿ, ರಾಣಿ ಗೈಡಿನ್ಲೂ ಜಿಲಿಯಾಂಗ ಧೈರ್ಯ ಮತ್ತು ಶೌರ್ಯ ಪ್ರಶಸ್ತಿಗಾಗಿ ಅಗಸ್ಟ್ 10ರೊಳಗೆ ಅರ್ಹರು ಅರ್ಜಿ ಸಲ್ಲಿಸಬೇಕು.