<p><strong>ಧಾರವಾಡ: </strong>ನಿವೇಶನ ವಿವಾದಕ್ಕೆ ಸಂಬಂಧಿಸಿದ ವ್ಯಾಜ್ಯದಲ್ಲಿ ಶಹರ ಠಾಣೆ ಪೊಲೀಸ್ ಅಧಿಕಾರಿಗಳು ತಮ್ಮ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ದೈವಜ್ಞ ಹೌಸಿಂಗ್ ಸೊಸೈಟಿ ಅಧ್ಯಕ್ಷ ಉತ್ತಮ ಪಾಲನಕರ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು. <br /> <br /> `ಈ ಕುರಿತು ಪೊಲೀಸ್ ಆಯುಕ್ತರಿಗೂ ಮನವಿ ಸಲ್ಲಿಸಲಾಗಿದೆ. ಆದರೂ ಸಹ ನಮ್ಮ ಮೇಲೆ ಪಿಐ ಟಿ.ಎಸ್.ಸುಲ್ಫಿ ಹಾಗೂ ಎಸಿಪಿ ಡಾ. ಸಂಜೀವ ಪಾಟೀಲ ಅವರು ದೌರ್ಜನ್ಯ ನಡೆಸಿದ್ದಾರೆ. ನಮ್ಮ ಜಾಗೆಯಲ್ಲಿ ಮನೆ ಕಟ್ಟಿ ಗೃಹಪ್ರವೇಶ ಮಾಡಲೂ ಸಹ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ~ ಎಂದು ಆಪಾದಿಸಿದರು. <br /> <br /> ತಮ್ಮ ಸೊಸೈಟಿಯು ಮದಿಹಾಳ ವ್ಯಾಪ್ತಿಯಲ್ಲಿ ವಸಂತ ಕಾಳಪ್ಪ ಪತ್ತಾರ ಹಾಗೂ ರಮಜಾನಸಾಬ್ ನದಾಫ್ ಎಂಬುವರಿಗೆ 1974ರಲ್ಲಿ ನಿವೇಶನ ಖರೀದಿ ನೀಡಿದೆ. ಈ ನಿವೇಶನಕ್ಕೆ ಸಂಬಂಧಿಸಿದ ವಿವಾದ ನ್ಯಾಯಾಲಯದಲ್ಲಿದೆ. ಆದರೆ ಪಕ್ಕದಲ್ಲಿರುವ ತಮ್ಮ ನಿವೇಶನದ ಬಗ್ಗೆ ತಕರಾರು ಅರ್ಜಿ ಸಲ್ಲಿಸಲಾಗಿದೆ. <br /> <br /> ಈ ಕುರಿತು ನ್ಯಾಯಾಲಯದ ತೀರ್ಪು ತಮ್ಮ ಪರವಾಗಿಯೇ ಇದ್ದರೂ ಸಹ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿದರು. <br /> <br /> ಗೃಹ ಪ್ರವೇಶಕ್ಕೆ ಬಂದವರಲ್ಲಿ ಎಂಟು ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಈ ಪೈಕಿ ಮೂವರನ್ನು ಸೋಮವಾರ ಬಿಡುಗಡೆ ಮಾಡಿದ್ದಾರೆ ಎಂದರು. <br /> <br /> ವಿವೇಕಾನಂದ ಪಾಲನಕರ, ಜಗದೀಶ ಪಾಲನಕರ ಪತ್ರಿಕಾಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ: </strong>ನಿವೇಶನ ವಿವಾದಕ್ಕೆ ಸಂಬಂಧಿಸಿದ ವ್ಯಾಜ್ಯದಲ್ಲಿ ಶಹರ ಠಾಣೆ ಪೊಲೀಸ್ ಅಧಿಕಾರಿಗಳು ತಮ್ಮ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ದೈವಜ್ಞ ಹೌಸಿಂಗ್ ಸೊಸೈಟಿ ಅಧ್ಯಕ್ಷ ಉತ್ತಮ ಪಾಲನಕರ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು. <br /> <br /> `ಈ ಕುರಿತು ಪೊಲೀಸ್ ಆಯುಕ್ತರಿಗೂ ಮನವಿ ಸಲ್ಲಿಸಲಾಗಿದೆ. ಆದರೂ ಸಹ ನಮ್ಮ ಮೇಲೆ ಪಿಐ ಟಿ.ಎಸ್.ಸುಲ್ಫಿ ಹಾಗೂ ಎಸಿಪಿ ಡಾ. ಸಂಜೀವ ಪಾಟೀಲ ಅವರು ದೌರ್ಜನ್ಯ ನಡೆಸಿದ್ದಾರೆ. ನಮ್ಮ ಜಾಗೆಯಲ್ಲಿ ಮನೆ ಕಟ್ಟಿ ಗೃಹಪ್ರವೇಶ ಮಾಡಲೂ ಸಹ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ~ ಎಂದು ಆಪಾದಿಸಿದರು. <br /> <br /> ತಮ್ಮ ಸೊಸೈಟಿಯು ಮದಿಹಾಳ ವ್ಯಾಪ್ತಿಯಲ್ಲಿ ವಸಂತ ಕಾಳಪ್ಪ ಪತ್ತಾರ ಹಾಗೂ ರಮಜಾನಸಾಬ್ ನದಾಫ್ ಎಂಬುವರಿಗೆ 1974ರಲ್ಲಿ ನಿವೇಶನ ಖರೀದಿ ನೀಡಿದೆ. ಈ ನಿವೇಶನಕ್ಕೆ ಸಂಬಂಧಿಸಿದ ವಿವಾದ ನ್ಯಾಯಾಲಯದಲ್ಲಿದೆ. ಆದರೆ ಪಕ್ಕದಲ್ಲಿರುವ ತಮ್ಮ ನಿವೇಶನದ ಬಗ್ಗೆ ತಕರಾರು ಅರ್ಜಿ ಸಲ್ಲಿಸಲಾಗಿದೆ. <br /> <br /> ಈ ಕುರಿತು ನ್ಯಾಯಾಲಯದ ತೀರ್ಪು ತಮ್ಮ ಪರವಾಗಿಯೇ ಇದ್ದರೂ ಸಹ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿದರು. <br /> <br /> ಗೃಹ ಪ್ರವೇಶಕ್ಕೆ ಬಂದವರಲ್ಲಿ ಎಂಟು ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಈ ಪೈಕಿ ಮೂವರನ್ನು ಸೋಮವಾರ ಬಿಡುಗಡೆ ಮಾಡಿದ್ದಾರೆ ಎಂದರು. <br /> <br /> ವಿವೇಕಾನಂದ ಪಾಲನಕರ, ಜಗದೀಶ ಪಾಲನಕರ ಪತ್ರಿಕಾಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>