<p><strong>ಕಲಘಟಗಿ: </strong>ಹೋಬಳಿ ಹಂತದಲ್ಲಿ ಭತ್ತ ಹಾಗೂ ಗೋವಿನಜೋಳ ಖರೀದಿ ಕೇಂದ್ರವನ್ನು ಪ್ರಾರಂಭಿಸಿಬೇಕೆಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧಿಕಾಯನ್ನು ಒತ್ತಾಯಿಸಿದೆ.<br /> <br /> ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದ ರೈತ ಭವನದಲ್ಲಿ ನಡೆದ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಬಿ.ಸಿ. ಪಾಟೀಲ ನೇತೃತ್ವದಲ್ಲಿ ಜರುಗಿದ ಸಭೆಯಲ್ಲಿ, ಜಿಲ್ಲಾಧಿಕಾರಿಗಳನ್ನು ಒತ್ತಾಯಿಸುವ ತೀರ್ಮಾನಕ್ಕೆ ಬರಲಾಯಿತು.<br /> <br /> ಈಗಾಗಲೇ ಜಿಲ್ಲಾಧಿಕಾರಿಗಳಿಗೆ ರೈತರ ಪರವಾಗಿ ಮನವಿ ಸಲ್ಲಿಸಿದ್ದು, ಭತ್ತದ ಖರೀದಿ ಕೇಂದ್ರ ತೆರೆಯುವ ಭರವಸೆ ದೊರೆತಿದ್ದರೂ, ಇನ್ನೂ ಖರೀದಿ ಕೇಂದ್ರ ಪ್ರಾರಂಭವಾಗಿಲ್ಲ ಎಂದರು.<br /> <br /> ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಗೋವಿನಜೋಳ ಖರೀದಿ ಕೇಂದ್ರವನ್ನು ಆರಂಭಿಸಲಾಗಿದ್ದರೂ, ಖರೀದಿಯನ್ನು ಇನ್ನಷ್ಟು ಚುರುಕುಗೊಳಿಸಬೇಕಿದ್ದು, ತೂಕದ ಯಂತ್ರ ಮತ್ತು ಸಿಬ್ಬಂದಿಗಳ ಅವಶ್ಯಕತೆ ಇದೆ ಎಂಬುದನ್ನು ಈ ಸಂದರ್ಭದಲ್ಲಿ ಹಾಜರಿದ್ದ ತಾಲ್ಲೂಕು ದಂಡಾಧಿಕಾರಿ ಕೆ.ಆರ್.ಕುಲಕರ್ಣಿ ಅವರಿಗೆ ಮನವರಿಕೆ ಮಾಡಲಾಯಿತು.<br /> <br /> ಇದೇ 25ರ ಒಳಗಾಗಿ ಬೇಡಿಕೆ ಈಡೇರದೇ ಇದ್ದಲ್ಲಿ ಹೋರಾಟ ನಡೆಸಬೇಕಾಗುತ್ತ ಎಂದು ಮನವಿಯಲ್ಲಿ ತಿಳಿಸಲಾಗಿದೆ.<br /> ಈ ಸಂದರ್ಭದಲ್ಲಿ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಘಟಕದ ಚನ್ನಯ್ಯಹಂಚಿನಮನಿ, ಮಹದೇವಗೌಡ ಸಿದ್ಧನಗೌಡ್ರ, ಶಿವಪ್ಪ ಹಿಂಡಸಗೇರಿ, ಎಂ.ಕೆ.ತಡಸ, ರುದ್ರಪ್ಪ ಬಿಸರಳ್ಳಿ, ಚನ್ನಪ್ಪ ದೇವಿಕೊಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಘಟಗಿ: </strong>ಹೋಬಳಿ ಹಂತದಲ್ಲಿ ಭತ್ತ ಹಾಗೂ ಗೋವಿನಜೋಳ ಖರೀದಿ ಕೇಂದ್ರವನ್ನು ಪ್ರಾರಂಭಿಸಿಬೇಕೆಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧಿಕಾಯನ್ನು ಒತ್ತಾಯಿಸಿದೆ.<br /> <br /> ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದ ರೈತ ಭವನದಲ್ಲಿ ನಡೆದ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಬಿ.ಸಿ. ಪಾಟೀಲ ನೇತೃತ್ವದಲ್ಲಿ ಜರುಗಿದ ಸಭೆಯಲ್ಲಿ, ಜಿಲ್ಲಾಧಿಕಾರಿಗಳನ್ನು ಒತ್ತಾಯಿಸುವ ತೀರ್ಮಾನಕ್ಕೆ ಬರಲಾಯಿತು.<br /> <br /> ಈಗಾಗಲೇ ಜಿಲ್ಲಾಧಿಕಾರಿಗಳಿಗೆ ರೈತರ ಪರವಾಗಿ ಮನವಿ ಸಲ್ಲಿಸಿದ್ದು, ಭತ್ತದ ಖರೀದಿ ಕೇಂದ್ರ ತೆರೆಯುವ ಭರವಸೆ ದೊರೆತಿದ್ದರೂ, ಇನ್ನೂ ಖರೀದಿ ಕೇಂದ್ರ ಪ್ರಾರಂಭವಾಗಿಲ್ಲ ಎಂದರು.<br /> <br /> ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಗೋವಿನಜೋಳ ಖರೀದಿ ಕೇಂದ್ರವನ್ನು ಆರಂಭಿಸಲಾಗಿದ್ದರೂ, ಖರೀದಿಯನ್ನು ಇನ್ನಷ್ಟು ಚುರುಕುಗೊಳಿಸಬೇಕಿದ್ದು, ತೂಕದ ಯಂತ್ರ ಮತ್ತು ಸಿಬ್ಬಂದಿಗಳ ಅವಶ್ಯಕತೆ ಇದೆ ಎಂಬುದನ್ನು ಈ ಸಂದರ್ಭದಲ್ಲಿ ಹಾಜರಿದ್ದ ತಾಲ್ಲೂಕು ದಂಡಾಧಿಕಾರಿ ಕೆ.ಆರ್.ಕುಲಕರ್ಣಿ ಅವರಿಗೆ ಮನವರಿಕೆ ಮಾಡಲಾಯಿತು.<br /> <br /> ಇದೇ 25ರ ಒಳಗಾಗಿ ಬೇಡಿಕೆ ಈಡೇರದೇ ಇದ್ದಲ್ಲಿ ಹೋರಾಟ ನಡೆಸಬೇಕಾಗುತ್ತ ಎಂದು ಮನವಿಯಲ್ಲಿ ತಿಳಿಸಲಾಗಿದೆ.<br /> ಈ ಸಂದರ್ಭದಲ್ಲಿ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಘಟಕದ ಚನ್ನಯ್ಯಹಂಚಿನಮನಿ, ಮಹದೇವಗೌಡ ಸಿದ್ಧನಗೌಡ್ರ, ಶಿವಪ್ಪ ಹಿಂಡಸಗೇರಿ, ಎಂ.ಕೆ.ತಡಸ, ರುದ್ರಪ್ಪ ಬಿಸರಳ್ಳಿ, ಚನ್ನಪ್ಪ ದೇವಿಕೊಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>