ಬಿರುಗಾಳಿಗೆ ಗ್ರಾಮದ ರೈತ ತನ್ವೀರ್ ಹಾದಿಮನಿ ಅವರಿಗೆ ಸೇರಿದ ಕೋಳಿ ಫಾರ್ಮ್ ಸಂಪೂರ್ಣವಾಗಿ ನೆಲಕಚ್ಚಿದ್ದು, ಮೂರು ಸಾವಿರಕ್ಕೂ ಅಧಿಕ ಕೋಳಿ ಮರಿಗಳು ಮೃತಪಟ್ಟಿವೆ. ₹6 ಲಕ್ಷ ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಕೋಳಿ ಫಾರ್ಮ್ ಕಲ್ಲೂರ ಗ್ರಾಮದ ವಿನಾಯಕ ಪಾಟೀಲ ಎಂಬುವರಿಗೆ ಬಾಡಿಗೆ ನೀಡಲಾಗಿತ್ತು. ಶಾಸಕ ಅಮೃತ ದೇಸಾಯಿ, ಜಿಲ್ಲಾ ಪಂಚಾಯ್ತಿ ಸದಸ್ಯ ಕಲ್ಲಪ್ಪ ಪುಡಕಲಕಟ್ಟಿ, ಗ್ರಾಮ ಪಂಚಾಯ್ತಿ ಅಧ್ಯಕ್ಷ ಮಹಾವೀರ ಅಷ್ಟಗಿ ಹಾಗೂ ತಹಶೀಲ್ದಾರ್ ಪ್ರಕಾಶ ಕುದರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.