ಹುಬ್ಬಳ್ಳಿ: ಹೆಚ್ಚಿನ ದರದ ಬಡ್ಡಿ ನೀಡುವುದಾಗಿ ಆಮಿಷ ಒಡ್ಡಿ ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಹಣ ಸಂಗ್ರಹಿಸಿದ ಆರೋಪದ ಮೇರೆಗೆ ನಾಲ್ವರನ್ನು ಕಲಘಟಗಿ ಠಾಣೆ ಪೊಲೀಸರು ಭಾನುವಾರ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.ಹಣ ವಂಚಿಸಿದ ಆರೋಪ ಎದುರಿಸುತ್ತಿರುವ ಹರ್ಷ ಎಂಟರ್ಟೈನ್ಮೆಂಟ್ ಪ್ರೈವೇಟ್ ಲಿಮಿಟೆಡ್ ಮಾಲೀಕರಾದ ಹರ್ಷ ಖಾಸನೀಸ ಅಲಿಯಾಸ್ ಸತ್ಯಬೋಧ, ಸಂಜೀವ ಖಾಸನೀಸ ಮತ್ತು ಶ್ರೀಕಾಂತ ಖಾಸನೀಸ ಅವರೊಂದಿಗೆ ಕೆಲಸ ಮಾಡುತ್ತಿದ್ದ ನಾಲ್ವರನ್ನು ವಶಕ್ಕೆ ಪಡೆದು, ವಿಚಾರಣೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.