<p><strong>ಧಾರವಾಡ: </strong>ಅವಳಿ ನಗರದಲ್ಲಿ ಒಂದೆಡೆ ವಿಜಯೋತ್ಸವ ಆಚರಿಸಿದರೆ, ಇನ್ನೊಂದೆಡೆ ಕರಾಳ ದಿನ ಆಚರಿಸಲಾಯಿತು. ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆದು, ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಲಾಯಿತು.</p>.<p>ಬಾಬರಿ ಮಸೀದಿ ಧ್ವಂಸಕ್ಕೆ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಅನುಮತಿ ಪಡೆಯದೆ ವಿಜಯೋತ್ಸವ ಆಚರಿಸುತ್ತಿದ್ದ ವಿಶ್ವ ಹಿಂದೂ ಪರಿಷತ್, ಬಜರಂಗ ದಳ ಕಾರ್ಯಕರ್ತರನ್ನು ಬುಧವಾರ ಪೊಲೀಸರು ವಶಕ್ಕೆ ಪಡೆದು, ಬಿಡುಗಡೆ ಮಾಡಿದರು.</p>.<p>ವಿವೇಕಾನಂದ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆಗೆ ಮುಂದಾದರು. ಅದನ್ನು ಪೊಲೀಸರು ತಡೆದರು. ಆಗ ಪೊಲೀಸರು ಹಾಗೂ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.</p>.<p>ಪೊಲೀಸರ ಮನವಿಯ ಮಧ್ಯೆಯೇ ವಿಜಯೋತ್ಸವಕ್ಕೆ ಮುಂದಾದ ಪಾಲಿಕೆ ಸದಸ್ಯ ಸಂಜಯ ಕಪಟಕರ, ಯುವ ಮೋರ್ಚಾ ಅಧ್ಯಕ್ಷ ಶರಣು ಅಂಗಡಿ, ನಗರ ಘಟಕದ ಅಧ್ಯಕ್ಷ ಯಲ್ಲಪ್ಪ ಯರವಾಳದ ಸೇರಿದಂತೆ 20ಕ್ಕೂ ಅಧಿಕ ಕಾರ್ಯಕರ್ತರನ್ನು ವಶಕ್ಕೆ ಪಡೆದು, ನಂತರ ಬಿಡುಗಡೆ ಮಾಡಿದರು.</p>.<p>ಇನ್ನೊಂದೆಡೆ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ ಕಮ್ಯುನಿಸ್ಟ್ ಪಕ್ಷದ ಕಚೇರಿಯಲ್ಲಿ ಪ್ರತಿಭಟನಾ ಸಭೆ ನಡೆಸುವ ಮೂಲಕ ಸಿಪಿಐ, ಸಿಪಿಐಎಂ ಕಾರ್ಯಕರ್ತರು ಕರಾಳ ದಿನ ಆಚರಿಸಿದರು.</p>.<p>ಎಸ್ಯುಸಿಐ ಪಕ್ಷದ ಜಿಲ್ಲಾ ಕಾರ್ಯದರ್ಶಿ ರಾಮಾಂಜನಪ್ಪ ಆಲ್ದಳ್ಳಿ, ‘ಬಾಬರಿ ಮಸೀದಿಯ ಧ್ವಂಸ ಕೇವಲ ಒಂದು ಸ್ಮಾರಕದ ಧ್ವಂಸವಲ್ಲ. ಇದು ಜನರ ಭಾವನೆಗಳಿಗೆ ಧಕ್ಕೆ ತಂದ ಹೇಯ ಕೃತ್ಯವಾಗಿದೆ’ ಎಂದರು.</p>.<p>ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಬಿ.ಎಸ್. ಸೊಪ್ಪಿನ, ಲೇಖಕಿ ಸುನಂದಾ ಕಡಮೆ, ಮುಖಂಡರಾದ ರಾಘವೇಂದ್ರ ಆಯಿ, ಕರಿಯಣ್ಣವರ್, ಬಿ.ಎನ್. ಪೂಜಾರ, ಎ.ಎಂ.ಖಾನ್, ಗಂಗಾಧರ ಬಡಿಗೇರ, ಲಕ್ಷ್ಮಣ ಜಡಗಣ್ಣವರ, ಮಹೇಶ ಪತ್ತಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ: </strong>ಅವಳಿ ನಗರದಲ್ಲಿ ಒಂದೆಡೆ ವಿಜಯೋತ್ಸವ ಆಚರಿಸಿದರೆ, ಇನ್ನೊಂದೆಡೆ ಕರಾಳ ದಿನ ಆಚರಿಸಲಾಯಿತು. ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆದು, ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಲಾಯಿತು.</p>.<p>ಬಾಬರಿ ಮಸೀದಿ ಧ್ವಂಸಕ್ಕೆ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಅನುಮತಿ ಪಡೆಯದೆ ವಿಜಯೋತ್ಸವ ಆಚರಿಸುತ್ತಿದ್ದ ವಿಶ್ವ ಹಿಂದೂ ಪರಿಷತ್, ಬಜರಂಗ ದಳ ಕಾರ್ಯಕರ್ತರನ್ನು ಬುಧವಾರ ಪೊಲೀಸರು ವಶಕ್ಕೆ ಪಡೆದು, ಬಿಡುಗಡೆ ಮಾಡಿದರು.</p>.<p>ವಿವೇಕಾನಂದ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆಗೆ ಮುಂದಾದರು. ಅದನ್ನು ಪೊಲೀಸರು ತಡೆದರು. ಆಗ ಪೊಲೀಸರು ಹಾಗೂ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.</p>.<p>ಪೊಲೀಸರ ಮನವಿಯ ಮಧ್ಯೆಯೇ ವಿಜಯೋತ್ಸವಕ್ಕೆ ಮುಂದಾದ ಪಾಲಿಕೆ ಸದಸ್ಯ ಸಂಜಯ ಕಪಟಕರ, ಯುವ ಮೋರ್ಚಾ ಅಧ್ಯಕ್ಷ ಶರಣು ಅಂಗಡಿ, ನಗರ ಘಟಕದ ಅಧ್ಯಕ್ಷ ಯಲ್ಲಪ್ಪ ಯರವಾಳದ ಸೇರಿದಂತೆ 20ಕ್ಕೂ ಅಧಿಕ ಕಾರ್ಯಕರ್ತರನ್ನು ವಶಕ್ಕೆ ಪಡೆದು, ನಂತರ ಬಿಡುಗಡೆ ಮಾಡಿದರು.</p>.<p>ಇನ್ನೊಂದೆಡೆ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ ಕಮ್ಯುನಿಸ್ಟ್ ಪಕ್ಷದ ಕಚೇರಿಯಲ್ಲಿ ಪ್ರತಿಭಟನಾ ಸಭೆ ನಡೆಸುವ ಮೂಲಕ ಸಿಪಿಐ, ಸಿಪಿಐಎಂ ಕಾರ್ಯಕರ್ತರು ಕರಾಳ ದಿನ ಆಚರಿಸಿದರು.</p>.<p>ಎಸ್ಯುಸಿಐ ಪಕ್ಷದ ಜಿಲ್ಲಾ ಕಾರ್ಯದರ್ಶಿ ರಾಮಾಂಜನಪ್ಪ ಆಲ್ದಳ್ಳಿ, ‘ಬಾಬರಿ ಮಸೀದಿಯ ಧ್ವಂಸ ಕೇವಲ ಒಂದು ಸ್ಮಾರಕದ ಧ್ವಂಸವಲ್ಲ. ಇದು ಜನರ ಭಾವನೆಗಳಿಗೆ ಧಕ್ಕೆ ತಂದ ಹೇಯ ಕೃತ್ಯವಾಗಿದೆ’ ಎಂದರು.</p>.<p>ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಬಿ.ಎಸ್. ಸೊಪ್ಪಿನ, ಲೇಖಕಿ ಸುನಂದಾ ಕಡಮೆ, ಮುಖಂಡರಾದ ರಾಘವೇಂದ್ರ ಆಯಿ, ಕರಿಯಣ್ಣವರ್, ಬಿ.ಎನ್. ಪೂಜಾರ, ಎ.ಎಂ.ಖಾನ್, ಗಂಗಾಧರ ಬಡಿಗೇರ, ಲಕ್ಷ್ಮಣ ಜಡಗಣ್ಣವರ, ಮಹೇಶ ಪತ್ತಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>