<p>ಧಾರವಾಡ: ಇಲ್ಲಿಯ ಶೀಲವಂತರ ಓಣಿಯಲ್ಲಿರುವ ಸರ್ಕಾರಿ ಉರ್ದು ಹೆಣ್ಣು ಮಕ್ಕಳ ಶಾಲೆಯಲ್ಲಿ ಬಡ ವಿದ್ಯಾರ್ಥಿಗಳಿಗೆ ಉಚಿತ ನೋಟ್ಬುಕ್ ವಿತರಣೆ ಹಾಗೂ ಬಸ್ ಪಾಸ್ ವಿತರಣೆ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.<br /> <br /> ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಾ.ಬಿ.ಕೆ.ಎಸ್.ವರ್ಧನ್ ಕಾರ್ಯಕ್ರಮ ಉದ್ಘಾಟಿಸಿ, `ಈ ಶಾಲೆಯಲ್ಲಿ ಶಿಕ್ಷಕರು ಹಳ್ಳಿಗಳಿಂದ, ಪಾಲಕರ ಮನವೊಲಿಸಿ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬಂದು ಅವರಿಗೆ ನೋಟ್ಬುಕ್ ಹಾಗೂ ಸ್ವತಃ ಶಿಕ್ಷಕರೇ ಹಣ ಕೊಟ್ಟು ಮಕ್ಕಳಿಗೆ ಬಸ್ಪಾಸ್ ನೀಡುತ್ತಿರುವ ಕಾರ್ಯ ಶ್ಲಾಘನೀಯ. ಇದರಿಂದ ಇತರೆ ಸರ್ಕಾರಿ ಶಾಲೆಗಳಿಗೆ ಇದು ಮಾದರಿ ಶಾಲೆಯಾಗಿದೆ~ ಎಂದರು. <br /> <br /> ಅಧ್ಯಕ್ಷತೆ ವಹಿಸಿದ್ದ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ ಗುರಿಕಾರ, `ಪ್ರತಿ ವರ್ಷ ಈ ಶಾಲೆಯ ಶಿಕ್ಷಕರು ಬಡ ಮಕ್ಕಳಿಗೆ ಉಚಿತ ನೋಟ್ಬುಕ್ ಹಾಗೂ ಬಸ್ಪಾಸ್ಗಳನ್ನು ವಿತರಿಸುತ್ತಾ ಬಂದು ಮಕ್ಕಳ ದಾಖಲಾತಿಯನ್ನು ಹೆಚ್ಚಿಸಿದ್ದಾರೆ. ಹಳ್ಳಿಗಳಲ್ಲಿ ಹಣಕಾಸಿನ ತೊಂದರೆ ಇದ್ದ ರೈತ ಮತ್ತು ಕೂಲಿ ಕಾರ್ಮಿಕರ ಮಕ್ಕಳ ಶಿಕ್ಷಣ ಅರ್ಧಕ್ಕೆ ಮೊಟಕಯಗೊಳಿಸುವ ಪಾಲಕರನ್ನು ಮನವೊಲಿಸಿ ಮಕ್ಕಳ ದಾಖಲಾತಿ ಹೆಚ್ಚಿಸುತ್ತಿದ್ದಾರೆ~ ಎಂದರು.<br /> <br /> ಇಲಾಖೆಯ ನೂತನ ಉಪನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಡಾ.ಬಿ.ಕೆ.ಎಸ್.ವರ್ಧನ್ ಹಾಗೂ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. <br /> <br /> ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಗಿರೀಶ ಪದಕಿ, ಜಿಲ್ಲಾ ಕಾರ್ಯದರ್ಶಿ ಸವಣೂರ, ದೈಹಿಕ ಶಿಕ್ಷಕ ಶಿ.ಹೊಗಿ, ಬಾರ್ಕಿ, ಲತಾ ಮುಳ್ಳೂರ, ವಿದ್ಯಾರ್ಥಿಗಳು ಹಾಗೂ ಪಾಲಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಚೌಧರಿ ನಿರೂಪಿಸಿದರು. ಕವಳಿಕಾಯಿ ಸ್ವಾಗತಿಸಿ, ವಂದಿಸಿದರು.<br /> <strong><br /> ಮಕ್ಕಳ ಆರೋಗ್ಯ ತಪಾಸಣೆ</strong><br /> ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ 6 ವರ್ಷದೊಳಗಿನ ಮಕ್ಕಳ ಅಪೌಷ್ಟಿಕತೆ ಕುರಿತು ಸರ್ವೆ ಕಾರ್ಯಜುಲೈ9 ರಿಂದ 15ರವರೆಗೆ ನಡೆಸಲಾಗುವುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ಇಲ್ಲಿಯ ಶೀಲವಂತರ ಓಣಿಯಲ್ಲಿರುವ ಸರ್ಕಾರಿ ಉರ್ದು ಹೆಣ್ಣು ಮಕ್ಕಳ ಶಾಲೆಯಲ್ಲಿ ಬಡ ವಿದ್ಯಾರ್ಥಿಗಳಿಗೆ ಉಚಿತ ನೋಟ್ಬುಕ್ ವಿತರಣೆ ಹಾಗೂ ಬಸ್ ಪಾಸ್ ವಿತರಣೆ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.<br /> <br /> ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಾ.ಬಿ.ಕೆ.ಎಸ್.ವರ್ಧನ್ ಕಾರ್ಯಕ್ರಮ ಉದ್ಘಾಟಿಸಿ, `ಈ ಶಾಲೆಯಲ್ಲಿ ಶಿಕ್ಷಕರು ಹಳ್ಳಿಗಳಿಂದ, ಪಾಲಕರ ಮನವೊಲಿಸಿ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬಂದು ಅವರಿಗೆ ನೋಟ್ಬುಕ್ ಹಾಗೂ ಸ್ವತಃ ಶಿಕ್ಷಕರೇ ಹಣ ಕೊಟ್ಟು ಮಕ್ಕಳಿಗೆ ಬಸ್ಪಾಸ್ ನೀಡುತ್ತಿರುವ ಕಾರ್ಯ ಶ್ಲಾಘನೀಯ. ಇದರಿಂದ ಇತರೆ ಸರ್ಕಾರಿ ಶಾಲೆಗಳಿಗೆ ಇದು ಮಾದರಿ ಶಾಲೆಯಾಗಿದೆ~ ಎಂದರು. <br /> <br /> ಅಧ್ಯಕ್ಷತೆ ವಹಿಸಿದ್ದ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ ಗುರಿಕಾರ, `ಪ್ರತಿ ವರ್ಷ ಈ ಶಾಲೆಯ ಶಿಕ್ಷಕರು ಬಡ ಮಕ್ಕಳಿಗೆ ಉಚಿತ ನೋಟ್ಬುಕ್ ಹಾಗೂ ಬಸ್ಪಾಸ್ಗಳನ್ನು ವಿತರಿಸುತ್ತಾ ಬಂದು ಮಕ್ಕಳ ದಾಖಲಾತಿಯನ್ನು ಹೆಚ್ಚಿಸಿದ್ದಾರೆ. ಹಳ್ಳಿಗಳಲ್ಲಿ ಹಣಕಾಸಿನ ತೊಂದರೆ ಇದ್ದ ರೈತ ಮತ್ತು ಕೂಲಿ ಕಾರ್ಮಿಕರ ಮಕ್ಕಳ ಶಿಕ್ಷಣ ಅರ್ಧಕ್ಕೆ ಮೊಟಕಯಗೊಳಿಸುವ ಪಾಲಕರನ್ನು ಮನವೊಲಿಸಿ ಮಕ್ಕಳ ದಾಖಲಾತಿ ಹೆಚ್ಚಿಸುತ್ತಿದ್ದಾರೆ~ ಎಂದರು.<br /> <br /> ಇಲಾಖೆಯ ನೂತನ ಉಪನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಡಾ.ಬಿ.ಕೆ.ಎಸ್.ವರ್ಧನ್ ಹಾಗೂ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. <br /> <br /> ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಗಿರೀಶ ಪದಕಿ, ಜಿಲ್ಲಾ ಕಾರ್ಯದರ್ಶಿ ಸವಣೂರ, ದೈಹಿಕ ಶಿಕ್ಷಕ ಶಿ.ಹೊಗಿ, ಬಾರ್ಕಿ, ಲತಾ ಮುಳ್ಳೂರ, ವಿದ್ಯಾರ್ಥಿಗಳು ಹಾಗೂ ಪಾಲಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಚೌಧರಿ ನಿರೂಪಿಸಿದರು. ಕವಳಿಕಾಯಿ ಸ್ವಾಗತಿಸಿ, ವಂದಿಸಿದರು.<br /> <strong><br /> ಮಕ್ಕಳ ಆರೋಗ್ಯ ತಪಾಸಣೆ</strong><br /> ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ 6 ವರ್ಷದೊಳಗಿನ ಮಕ್ಕಳ ಅಪೌಷ್ಟಿಕತೆ ಕುರಿತು ಸರ್ವೆ ಕಾರ್ಯಜುಲೈ9 ರಿಂದ 15ರವರೆಗೆ ನಡೆಸಲಾಗುವುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>