ಕುಂದಗೋಳ: ಪ್ರಸಕ್ತ ಸಾಲಿನ ಮುಂಗಾರು ಮಳೆ ಇಲ್ಲದಂತಾಗಿದ್ದು, ಕಳೆದ ವರ್ಷದ ಕೇಂದ್ರ ಸರ್ಕಾರದ ಫಸಲ್ ಬಿಮಾ ವಿಮೆ ಹಣವನ್ನು ಕೂಡಲೇ ರೈತರ ಬ್ಯಾಂಕ್ ಖಾತೆಗಳಿಗೆ ಜಮೆಗೊಳಿಸಲು ವಿಮೆ ಕಂಪೆನಿಯವರಿಗೆ ಸೂಚಿಸಬೇಕು ಎಂದು ಆಗ್ರಹಿಸಿ ತಾಲ್ಲೂಕಿನ ರೈತರು ಇಲ್ಲಿನ ಸಹಾಯಕ ಕೃಷಿ ಇಲಾಖೆ ನಿರ್ದೇಶಕರಿಗೆ ಇತ್ತೀಚೆಗೆ ಮನವಿ ಸಲ್ಲಿಸಿದರು.