ಮೈದಾನದ ಪಕ್ಕದಲ್ಲಿ ರಸ್ತೆ ಬದಿ ವ್ಯಾಪಾರ ಮಾಡಿದರೆ ವಾಹನ ಸಂಚಾರಕ್ಕೆ ಅಡಚಣೆಯಾಗುತ್ತದೆ ಎಂಬ ಕಾರಣಕ್ಕೆ ಪೊಲೀಸರು ಅವಕಾಶ ನೀಡುತ್ತಿಲ್ಲ. ಅಲ್ಲದೇ, ರಸ್ತೆಯಲ್ಲಿ ವಾಹನ ನಿಲ್ಲಿಸಲು ಜಾಗವಿಲ್ಲದಕ್ಕೆ ಹಣ್ಣು ಖರೀದಿಗೆ ಗ್ರಾಹಕರು ಬರುತ್ತಿಲ್ಲ ಎಂದು ಅಲವತ್ತುಕೊಂಡರು.ಮಾರುಕಟ್ಟೆಗೆ ಸದ್ಯ ಮಾವು ಮತ್ತು ಹಲಸಿನ ಹಣ್ಣು ಹೇರಳವಾಗಿ ಬರುತ್ತಿದೆ. ಈ ಸಂದರ್ಭದಲ್ಲಿ ನಾವು ವ್ಯಾಪಾರ ಮಾಡದಿದ್ದರೆ ಕುಟುಂಬ ನಡೆಸುವುದು ಕಷ್ಟವಾಗುತ್ತದೆ. ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು. ಮನವಿಗೆ ಸ್ಪಂದಿಸಿದ ಮೇಯರ್ ಮತ್ತು ಆಯುಕ್ತರು, ಈದ್ಗಾ ಮೈದಾನದೊಳಗೆ ಹಣ್ಣಿನ ವ್ಯಾಪಾರಕ್ಕೆ ಮತ್ತು ವಾಹನ ನಿಲುಗಡೆಗೆ ಅವಕಾಶ ಮಾಡಿಕೊಟ್ಟರು.