ಹುಬ್ಬಳ್ಳಿ: ‘ರೈತರ ಬೆಳೆಗೆ ಲಾಭದಾಯಕ ಬೆಲೆ ಖಾತ್ರಿಪಡಿಸುವುದಕ್ಕೆ ಸಂಬಂಧಿಸಿದ ಡಾ. ಎಂ.ಎಸ್. ಸ್ವಾಮಿನಾಥನ್ ಆಯೋಗದ ಶಿಫಾರಸು ಜಾರಿ ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಈಗಾಗಲೇ ಸುಪ್ರೀಂಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿದೆ. ಆದರೆ, ಸಂಸದ ಪ್ರಹ್ಲಾದ ಜೋಶಿ ಅವರು, ಇದೆಲ್ಲ ಸುಳ್ಳು ಎಂದು ಹೇಳುವ ಮೂಲಕ ರೈತರಿಗೆ ಮಂಕುಬೂದಿ ಎರಚುತ್ತಿದ್ದಾರೆ’ ಎಂದು ಜೆಡಿಎಸ್ ರೈತ ರಾಜ್ಯ ಘಟಕದ ಅಧ್ಯಕ್ಷ ಗಂಗಾಧರ ಪಾಟೀಲ ಕುಲಕರ್ಣಿ ಹೇಳಿದರು.