ಹುಬ್ಬಳ್ಳಿ: `ಕೇಂದ್ರದಲ್ಲಿ ಆಡಳಿತದಲ್ಲಿ ರುವ ಯುಪಿಎ ಸರ್ಕಾರದ ನೇತೃತ್ವ ದಲ್ಲಿನ ಕಾಂಗ್ರೆಸ್ ಪಕ್ಷದ ಕೈಗೊಂಬೆ ಯಾಗಿ ಸಿಬಿಐ ವರ್ತಿಸುತ್ತಿದೆ' ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಗಂಭೀರ ಆರೋಪ ಮಾಡಿದರು.
ನಗರದಲ್ಲಿ ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, `ಈ ಕಾರಣಕ್ಕೆ ಹಿಂದಿನಿಂದಲೂ ಸಿಬಿಐ ತನಿಖೆಗೆ ಬಿಜೆಪಿ ಸರ್ಕಾರ ಹಿಂದೇಟು ಹಾಕುತ್ತಿದೆ. ಸಿಬಿಐ ಮಾಜಿ ನಿರ್ದೇಶಕ ಜೋಗಿಂದರ್ ಸಿಂಗ್ ಇತ್ತೀಚೆಗೆ ನೀಡಿರುವ ಹೇಳಿಕೆ ಈ ಆರೋಪವನ್ನು ಇನ್ನಷ್ಟು ಪುಷ್ಟೀಕರಿಸುತ್ತದೆ' ಎಂದರು.
`ಭ್ರಷ್ಟಾಚಾರದ ಹಲವು ಪ್ರಕರಣಗ ಳಿದ್ದರೂ ಅವುಗಳ ತನಿಖೆಗೆ ಸಿಬಿಐ ಮುಂದಾಗುತ್ತಿಲ್ಲ. ಆದರೆ ಕಾಂಗ್ರೆಸ್ ವಿರೋಧ ಪಕ್ಷಗಳ ವಿರುದ್ಧ ಸಿಬಿಐ ಅನ್ನು ಅಸ್ತ್ರವಾಗಿ ಬಳಸುತ್ತಿದೆ' ಎಂದು ಟೀಕಿಸಿದರು.
ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ನೀಡಿದ ಕುರಿತು ಪ್ರತಿಕ್ರಿಯಿಸಿದ ಅವರು, `ಈಗಾಗಲೇ ಈಶ್ವರಪ್ಪ ಆಸ್ತಿ ಘೊಷಣೆ ಮಾಡಿ ಕೊಂಡಿದ್ದಾರೆ.