ಧಾರವಾಡ: ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್, ಗಾಂಜಾ ಸೇರಿದಂತೆ ಮಾದಕವಸ್ತು ಹೊಂದಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಉಪ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ನೇತೃತ್ವದಲ್ಲಿ ಶುಕ್ರವಾರ ಬೆಳಿಗ್ಗೆ ದಾಳಿ ನಡೆಸಿ, ಪರಿಶೀಲನೆ ನಡೆಸಲಾಯಿತು.
ದಾಳಿ ಸಂದರ್ಭದಲ್ಲಿ ಕಾರಾಗೃಹದಲ್ಲಿ 6 ಮೊಬೈಲ್ ಹಾಗೂ ₹9,000 ನಗದು ಪತ್ತೆಯಾಗಿದೆ. ಜೈಲು ಅಧಿಕಾರಿಗಳಿಗೆ ಮಾಹಿತಿ ನೀಡದೇ ದಿಢೀರ್ ದಾಳಿ ನಡೆಸಿದ್ದರಿಂದ ಕೆಲ ಕಾಲ ಜೈಲು ಸಿಬ್ಬಂದಿ ತಬ್ಬಿಬ್ಬಾದರು.
ಜೈಲಿನಲ್ಲಿ ದೊರೆತಿರುವ ಕೆಲವು ಮೊಬೈಲ್, ಹಣ ಹಾಗೂ ಇತರ ವಸ್ತುಗಳು ಯಾರಿಗೆ ಸೇರಿವೆ. ಒಳಗಡೆ ಹೇಗೆ ತೆಗೆದುಕೊಂಡು ಹೋಗಲಾಗಿದೆ ಎಂಬ ಬಗ್ಗೆ ತನಿಖೆ ನಡೆಸಿದ ಬಳಿಕ ಪ್ರಕರಣ ದಾಖಲಿಸಲಾಗುವುದು ಎಂದು ಡಿಸಿಪಿ ರೇಣುಕಾ ಸುಕುಮಾರ್ ತಿಳಿಸಿದ್ದಾರೆ.