<p><strong>ಹುಬ್ಬಳ್ಳಿ: `</strong>ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು~ ಎಂದು ಧಾರವಾಡ ಡಯಟ್ ಸಂಸ್ಥೆಯ ಪಿಎಸ್ಟಿ ವಿಭಾಗದ ಮುಖ್ಯಸ್ಥ ಆರ್.ಎಚ್. ಶಿವಳ್ಳಿ ಸಲಹೆ ನೀಡಿದರು. <br /> <br /> ನಗರದ ಬಿ.ವಿ. ಭೂಮರಡ್ಡಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಂಗಳವಾರ ಏರ್ಪಡಿಸಿದ ಹುಬ್ಬಳ್ಳಿ ವಲಯ ಮಟ್ಟದ ಡಿ.ಇಡಿ ಕಾಲೇಜು ವಿದ್ಯಾರ್ಥಿಗಳ ಯುವಜನೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಕ್ರೀಡಾಜ್ಯೋತಿ ಸ್ವೀಕರಿಸಿ ಅವರು ಮಾತನಾಡಿದರು. <br /> <br /> `ಸದೃಢ ದೇಹವಿದ್ದಾಗ ಸದೃಢ ಮನಸ್ಸು ಇರಲು ಸಾಧ್ಯ. ಇದಕ್ಕಾಗಿ ದೈಹಿಕವಾಗಿ ಸದೃಢವಂತರಾಗಲು ಕ್ರೀಡೆಗಳಲ್ಲಿ ಭಾಗವಹಿಸಬೇಕು~ ಎಂದು ಅವರು ಕಿವಿಮಾತು ಹೇಳಿದರು. ಧ್ವಜಾರೋಹಣಗೈದ ಜೆಜಿಟಿಟಿಐ ಸ್ಥಾನಿಕ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಬಿ.ಜಿ. ವಾಲಿ, ದೇಶ ಕಟ್ಟುವಲ್ಲಿ ಶಿಕ್ಷಕರ ಪಾತ್ರ ಮಹತ್ವವಾದುದು. ಶಿಕ್ಷಕರಾದ ನಂತರ ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸುವ ಮೂಲಕ ಗ್ರಾಮಗಳನ್ನು ಕಟ್ಟಿರಿ ಎಂದರು.<br /> <br /> ಮುಖ್ಯ ಅತಿಥಿಗಳಾಗಿ ಡಯಟ್ ಉಪನ್ಯಾಸಕ ಎ.ಎನ್. ಕಾಂಬೋಗಿ, ಜೆಜಿಟಿಟಿಐ ಅಧೀಕ್ಷಕ ಎಸ್.ವೈ. ಕುಂದರಗಿ, ಎಚ್ಎಸ್ಫ್ ಡಿ.ಇಡಿ ಕಾಲೇಜಿನ ಕಾರ್ಯದರ್ಶಿ ಗೌಸ್ ಖಾನ್ ಗುರಾಣಿ, ಡಯಟ್ ಉಪನ್ಯಾಸಕ ಎಂ.ಎ. ಕುಲಕರ್ಣಿ ಹಾಗೂ ದೈಹಿಕ ಶಿಕ್ಷಣಾಧಿಕಾರಿ ಎಂ.ಜೆ. ಅಂಗಡಿ ಭಾಗವಹಿಸಿದ್ದರು.<br /> <br /> ಮೀನಾಕ್ಷಿ ಭಜಂತ್ರಿ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಪಿ.ಕೆ. ಸುಧಾಕರ ಸ್ವಾಗತಿಸಿದರು. ಶ್ರೀಕಾಂತ ಸುಣಗಾರ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಮುತ್ತುರಾಜ ಗುಲಗಂಜಿ ವಂದಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: `</strong>ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು~ ಎಂದು ಧಾರವಾಡ ಡಯಟ್ ಸಂಸ್ಥೆಯ ಪಿಎಸ್ಟಿ ವಿಭಾಗದ ಮುಖ್ಯಸ್ಥ ಆರ್.ಎಚ್. ಶಿವಳ್ಳಿ ಸಲಹೆ ನೀಡಿದರು. <br /> <br /> ನಗರದ ಬಿ.ವಿ. ಭೂಮರಡ್ಡಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಂಗಳವಾರ ಏರ್ಪಡಿಸಿದ ಹುಬ್ಬಳ್ಳಿ ವಲಯ ಮಟ್ಟದ ಡಿ.ಇಡಿ ಕಾಲೇಜು ವಿದ್ಯಾರ್ಥಿಗಳ ಯುವಜನೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಕ್ರೀಡಾಜ್ಯೋತಿ ಸ್ವೀಕರಿಸಿ ಅವರು ಮಾತನಾಡಿದರು. <br /> <br /> `ಸದೃಢ ದೇಹವಿದ್ದಾಗ ಸದೃಢ ಮನಸ್ಸು ಇರಲು ಸಾಧ್ಯ. ಇದಕ್ಕಾಗಿ ದೈಹಿಕವಾಗಿ ಸದೃಢವಂತರಾಗಲು ಕ್ರೀಡೆಗಳಲ್ಲಿ ಭಾಗವಹಿಸಬೇಕು~ ಎಂದು ಅವರು ಕಿವಿಮಾತು ಹೇಳಿದರು. ಧ್ವಜಾರೋಹಣಗೈದ ಜೆಜಿಟಿಟಿಐ ಸ್ಥಾನಿಕ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಬಿ.ಜಿ. ವಾಲಿ, ದೇಶ ಕಟ್ಟುವಲ್ಲಿ ಶಿಕ್ಷಕರ ಪಾತ್ರ ಮಹತ್ವವಾದುದು. ಶಿಕ್ಷಕರಾದ ನಂತರ ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸುವ ಮೂಲಕ ಗ್ರಾಮಗಳನ್ನು ಕಟ್ಟಿರಿ ಎಂದರು.<br /> <br /> ಮುಖ್ಯ ಅತಿಥಿಗಳಾಗಿ ಡಯಟ್ ಉಪನ್ಯಾಸಕ ಎ.ಎನ್. ಕಾಂಬೋಗಿ, ಜೆಜಿಟಿಟಿಐ ಅಧೀಕ್ಷಕ ಎಸ್.ವೈ. ಕುಂದರಗಿ, ಎಚ್ಎಸ್ಫ್ ಡಿ.ಇಡಿ ಕಾಲೇಜಿನ ಕಾರ್ಯದರ್ಶಿ ಗೌಸ್ ಖಾನ್ ಗುರಾಣಿ, ಡಯಟ್ ಉಪನ್ಯಾಸಕ ಎಂ.ಎ. ಕುಲಕರ್ಣಿ ಹಾಗೂ ದೈಹಿಕ ಶಿಕ್ಷಣಾಧಿಕಾರಿ ಎಂ.ಜೆ. ಅಂಗಡಿ ಭಾಗವಹಿಸಿದ್ದರು.<br /> <br /> ಮೀನಾಕ್ಷಿ ಭಜಂತ್ರಿ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಪಿ.ಕೆ. ಸುಧಾಕರ ಸ್ವಾಗತಿಸಿದರು. ಶ್ರೀಕಾಂತ ಸುಣಗಾರ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಮುತ್ತುರಾಜ ಗುಲಗಂಜಿ ವಂದಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>