ಹಣ್ಣಿನ ವ್ಯಾಪಾರಿಯಾಗಿದ್ದ ಪರಶುರಾಮ ಮೇಲೆ ಹಲ್ಲೆ ನಡೆಸಿದ ಆರೋಪಿಗಳು ರಾಜಾರೋಷವಾಗಿ ಓಡಾಡುತ್ತಿದ್ದು ಅವರನ್ನು ಬಂಧಿಸಬೇಕು. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೇಶ್ವಾಪುರ ಠಾಣೆ ಇನ್ಸ್ಪೆಕ್ಟರ್ ಶ್ಯಾಮರಾವ್ ಸಜ್ಜನ ಅವರನ್ನು ಸುತ್ತುವರಿದರು.
ಈ ವೇಳೆ ಪೊಲೀಸರು ಅವರ ಮನವೊಲಿಸಲು ಯತ್ನಿಸಿದರು. ಮೃತನ ಪತ್ನಿ ಲಕ್ಷ್ಮಿ ಪರಶುರಾಮ ಮತ್ತು ಸಂಬಂಧಿಕರು ನ್ಯಾಯ ಒದಗಿಸಬೇಕು ಎಂದು ಪೊಲೀಸರ ಎದುರು ಚೀರಾಡಿದರು.
‘ಬಡ್ಡಿ ದಂದೆ ನಡೆಸುತ್ತಿರುವ ಕಿರಣ, ಮದನ ಬುಗುಡಿ, ದೊಡ್ಡೇಶ ದೊಡ್ಡಮನಿ ಎಂಬುವರು ಪತಿಯನ್ನು ಫೆ. 2ರಂದು ಅಪಹರಿಸಿ ಕರೆದೊಯ್ದು, ಕೊಠಡಿಯೊಂದರಲ್ಲಿ ಕೂಡಿಹಾಕಿ ಬೆತ್ತಲೆಗೊಳಿಸಿ ಮನಸೋಇಚ್ಛೆ ಥಳಿಸಿದ್ದಾರೆ. ಬಳಿಕ ಹಳೆ ಬಸ್ ನಿಲ್ದಾಣದ ಬಳಿ ಅವರನ್ನು ಬಿಟ್ಟು ಪರಾರಿಯಾಗಿದ್ದಾರೆ.