ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಹಿರಿಯ ನಾಗರಿಕರನ್ನು ಕಡೆಗಣಿಸಿದ ಸರ್ಕಾರ’

Last Updated 6 ಡಿಸೆಂಬರ್ 2021, 16:33 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಪಂಚಾಯಿತಿ ಸದಸ್ಯರು ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಬೇಕು’ ಎಂದು ತಾಲ್ಲೂಕಿನ ಅದರಗುಂಚಿ ಗ್ರಾಮದ ವಿರೂಪಾಕ್ಷಗೌಡ ಪಾಟೀಲ ವಿನಂತಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಿರಿಯ ನಾಗರಿಕರಿಗೆ ಕೇಂದ್ರ ಅಥವಾ ರಾಜ್ಯ ಸರ್ಕಾರ ಯಾವುದೇ ಸಹಕಾರ, ಸೌಲಭ್ಯಗಳನ್ನು ಸರಿಯಾಗಿ ನೀಡುತ್ತಿಲ್ಲ. ಕ್ರೀಡಾಕೂಟದಲ್ಲಿ ಹಿರಿಯ ನಾಗರಿಕರು ರಾಷ್ಟ್ರಮಟ್ಟದಲ್ಲಿ ಗೆದ್ದರೂ ಹಣಕಾಸಿನ ತೊಂದರೆಯಿಂದ ವಿದೇಶಕ್ಕೆ ತೆರಳಲು ಸಾಧ್ಯವಾಗುತ್ತಿಲ್ಲ. ಈ ನಿರ್ಲಕ್ಷ್ಯ ತೊಡೆದು ಹಾಕಲು ಹಿರಿಯ ನಾಗರಿಕರ ಕ್ರೀಡಾ ಒಕ್ಕೂಟದ ಬೆಂಬಲದೊಂದಿಗೆ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT