ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಿರಿಯ ನಾಗರಿಕರಿಗೆ ಕೇಂದ್ರ ಅಥವಾ ರಾಜ್ಯ ಸರ್ಕಾರ ಯಾವುದೇ ಸಹಕಾರ, ಸೌಲಭ್ಯಗಳನ್ನು ಸರಿಯಾಗಿ ನೀಡುತ್ತಿಲ್ಲ. ಕ್ರೀಡಾಕೂಟದಲ್ಲಿ ಹಿರಿಯ ನಾಗರಿಕರು ರಾಷ್ಟ್ರಮಟ್ಟದಲ್ಲಿ ಗೆದ್ದರೂ ಹಣಕಾಸಿನ ತೊಂದರೆಯಿಂದ ವಿದೇಶಕ್ಕೆ ತೆರಳಲು ಸಾಧ್ಯವಾಗುತ್ತಿಲ್ಲ. ಈ ನಿರ್ಲಕ್ಷ್ಯ ತೊಡೆದು ಹಾಕಲು ಹಿರಿಯ ನಾಗರಿಕರ ಕ್ರೀಡಾ ಒಕ್ಕೂಟದ ಬೆಂಬಲದೊಂದಿಗೆ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ’ ಎಂದರು.