<p>ಹುಬ್ಬಳ್ಳಿ: ‘ಯುವ ಚಿತ್ರಕಲಾ ಕಲಾವಿದರ ಪ್ರೋತ್ಸಾಹಕ್ಕೆ ಮೂರು ಸಾವಿರ ಮಠದ ವಿದ್ಯಾವರ್ಧಕ ಸಂಘ ಹಾಗೂ ವಿಜಯ ಮಹಾಂತೇಶ ಲಲಿತ ಕಲಾ ಕಾಲೇಜು ಸದಾ ಸಿದ್ಧವಾಗಿರುತ್ತದೆ. ಎಲ್ಲದಕ್ಕೂ ನಾವು ಸರ್ಕಾರವನ್ನು ನೆಚ್ಚಿಕೊಂಡು ಕುಳಿತುಕೊಳ್ಳುವುದಿಲ್ಲ. ಯುವ ಕಲಾವಿದರಿಗೆ ಆರ್ಥಿಕ ಸಹಾಯ ನೀಡಲು ನಾವು ಸಶಕ್ತರಾಗಿದ್ದೇವೆ’ ಎಂದು ಮೂರು ಸಾವಿರ ಮಠದ ವಿದ್ಯಾವರ್ಧಕ ಸಂಘದ ಗೌರವ ಅಧ್ಯಕ್ಷ ಅರವಿಂದ ಕುಬಸದ ಘೋಷಿಸಿದರು.<br /> <br /> ‘ಧಾರವಾಡ ಉತ್ಸವ–13’ ಅಂಗವಾಗಿ ನಗರದ ವಿಜಯ ಮಹಾಂತೇಶ ಲಲಿತಕಲಾ ಕಾಲೇಜು ಎದುರಿನ ಕಾರ್ಪೋರೇಶನ್ ಗಾರ್ಡನ್ನಲ್ಲಿ ಮೂರು ದಿನ ನಡೆಯಲಿರುವ ಯುವ ಕಲಾವಿದರ ಚಿತ್ರಕಲಾ ಶಿಬಿರದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡು ಸೋಮವಾರ ಮಾತನಾಡಿದ ಅವರು, ‘ಹಂಪಿ ಉತ್ಸವ, ಮೈಸೂರು ದಸರಾ ಉತ್ಸವಕ್ಕೆ ಸರ್ಕಾರ ಕೋಟಿಗಟ್ಟಲೇ ದುಡ್ಡು ನೀಡುತ್ತದೆ. ಧಾರವಾಡ ಜಿಲ್ಲಾ ಉತ್ಸವಕ್ಕೆ ದುಡ್ಡು ನೀಡುವುದಿಲ್ಲ. ಆದರೆ, ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹೆಸರು ಹಾಕಲೇಬೇಕು. ಉತ್ತರ ಕರ್ನಾಟಕ ಎಂದರೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ಮಾಡುತ್ತದೆ’ ಎಂದು ಅವರು ಆರೋಪಿಸಿದರು.<br /> <br /> ಮೂರುಸಾವಿರ ಮಠದ ವಿದ್ಯಾವರ್ಧಕ ಸಂಘದ ಗೌರವ ಕಾರ್ಯದರ್ಶಿ ಹನುಮಂತ ಶಿಗ್ಗಾಂವ ಮಾತನಾಡಿ ‘ ಯುವ ಚಿತ್ರಕಲಾವಿದರು ಕಾಟಾಚಾರಕ್ಕೆ, ಸನ್ಮಾನ ಪತ್ರಕ್ಕಾಗಿ ಮಾತ್ರ ಶಿಬಿರದಲ್ಲಿ ಭಾಗವಹಿಸದೆ ತಮ್ಮ ಕಲೆಯ ಪ್ರದರ್ಶನ ಮಾಡಿ, ಶಿಬಿರವನ್ನು ಸದುಪಯೋಗಪಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.<br /> <br /> ಹಂಪಿಯ ಕನ್ನಡ ವಿವಿ ಸಿಂಡಿಕೇಟ್ ಸದಸ್ಯರಾದ ಸುಭಾಷ್ ಸಿಂಗ್ ಜಮಾದಾರ, ‘ದೇಶದ ಸಂಸ್ಕೃತಿ, ಇತಿಹಾಸವನ್ನು ಯುವ ಕಲಾವಿದರು ಮುಂದೆ ತೆಗೆದುಕೊಂಡು ಹೋಗಬೇಕು. ಇಂತಹ ಉತ್ಸವಗಳು ಕಲಾವಿದರಿಗೆ ಉತ್ತಮ ವೇದಿಕೆ. ಹೊಸದನ್ನು ಕಲಿಯಿರಿ, ಶಿಬಿರವನ್ನು ಸದುಪಯೋಗ ಪಡಿಸಿಕೊಳ್ಳಿ’ ಎಂದರು.<br /> <br /> ಸ್ಥಳದಲ್ಲೇ ಚಿತ್ರ ಬಿಡಿಸುವ ಮೂಲಕ, ಹಿರಿಯ ಕಲಾವಿದ ಎಂ.ಸಿ. ಚಟ್ಟಿ ಶಿಬಿರ ಉದ್ಘಾಟಿಸಿದರು. ಮನೋಜ್ ಹಾನಗಲ್, ಬಿ.ವೈ. ನಾಗನಗೌಡ್ರ, ಡಾ. ಶಂಕರ ಕುಂದಗೋಳ, ಆರ್.ಬಿ. ಗರಗ, ಎಂ.ಜಿ. ಬಂಗ್ಲಿವಾಲೆ ಮತ್ತಿತರರು ಉಪಸ್ಥಿತರಿದ್ದರು. ಶಿಬಿರದಲ್ಲಿ ಹುಬ್ಬಳ್ಳಿ–ಧಾರವಾಡದ 35 ಯುವ ಕಲಾವಿದರು ಪಾಲ್ಗೊಂಡಿದ್ದಾರೆ. ಇದೇ 11ರವರೆಗೆ ಶಿಬಿರ ನಡೆಯುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ‘ಯುವ ಚಿತ್ರಕಲಾ ಕಲಾವಿದರ ಪ್ರೋತ್ಸಾಹಕ್ಕೆ ಮೂರು ಸಾವಿರ ಮಠದ ವಿದ್ಯಾವರ್ಧಕ ಸಂಘ ಹಾಗೂ ವಿಜಯ ಮಹಾಂತೇಶ ಲಲಿತ ಕಲಾ ಕಾಲೇಜು ಸದಾ ಸಿದ್ಧವಾಗಿರುತ್ತದೆ. ಎಲ್ಲದಕ್ಕೂ ನಾವು ಸರ್ಕಾರವನ್ನು ನೆಚ್ಚಿಕೊಂಡು ಕುಳಿತುಕೊಳ್ಳುವುದಿಲ್ಲ. ಯುವ ಕಲಾವಿದರಿಗೆ ಆರ್ಥಿಕ ಸಹಾಯ ನೀಡಲು ನಾವು ಸಶಕ್ತರಾಗಿದ್ದೇವೆ’ ಎಂದು ಮೂರು ಸಾವಿರ ಮಠದ ವಿದ್ಯಾವರ್ಧಕ ಸಂಘದ ಗೌರವ ಅಧ್ಯಕ್ಷ ಅರವಿಂದ ಕುಬಸದ ಘೋಷಿಸಿದರು.<br /> <br /> ‘ಧಾರವಾಡ ಉತ್ಸವ–13’ ಅಂಗವಾಗಿ ನಗರದ ವಿಜಯ ಮಹಾಂತೇಶ ಲಲಿತಕಲಾ ಕಾಲೇಜು ಎದುರಿನ ಕಾರ್ಪೋರೇಶನ್ ಗಾರ್ಡನ್ನಲ್ಲಿ ಮೂರು ದಿನ ನಡೆಯಲಿರುವ ಯುವ ಕಲಾವಿದರ ಚಿತ್ರಕಲಾ ಶಿಬಿರದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡು ಸೋಮವಾರ ಮಾತನಾಡಿದ ಅವರು, ‘ಹಂಪಿ ಉತ್ಸವ, ಮೈಸೂರು ದಸರಾ ಉತ್ಸವಕ್ಕೆ ಸರ್ಕಾರ ಕೋಟಿಗಟ್ಟಲೇ ದುಡ್ಡು ನೀಡುತ್ತದೆ. ಧಾರವಾಡ ಜಿಲ್ಲಾ ಉತ್ಸವಕ್ಕೆ ದುಡ್ಡು ನೀಡುವುದಿಲ್ಲ. ಆದರೆ, ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹೆಸರು ಹಾಕಲೇಬೇಕು. ಉತ್ತರ ಕರ್ನಾಟಕ ಎಂದರೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ಮಾಡುತ್ತದೆ’ ಎಂದು ಅವರು ಆರೋಪಿಸಿದರು.<br /> <br /> ಮೂರುಸಾವಿರ ಮಠದ ವಿದ್ಯಾವರ್ಧಕ ಸಂಘದ ಗೌರವ ಕಾರ್ಯದರ್ಶಿ ಹನುಮಂತ ಶಿಗ್ಗಾಂವ ಮಾತನಾಡಿ ‘ ಯುವ ಚಿತ್ರಕಲಾವಿದರು ಕಾಟಾಚಾರಕ್ಕೆ, ಸನ್ಮಾನ ಪತ್ರಕ್ಕಾಗಿ ಮಾತ್ರ ಶಿಬಿರದಲ್ಲಿ ಭಾಗವಹಿಸದೆ ತಮ್ಮ ಕಲೆಯ ಪ್ರದರ್ಶನ ಮಾಡಿ, ಶಿಬಿರವನ್ನು ಸದುಪಯೋಗಪಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.<br /> <br /> ಹಂಪಿಯ ಕನ್ನಡ ವಿವಿ ಸಿಂಡಿಕೇಟ್ ಸದಸ್ಯರಾದ ಸುಭಾಷ್ ಸಿಂಗ್ ಜಮಾದಾರ, ‘ದೇಶದ ಸಂಸ್ಕೃತಿ, ಇತಿಹಾಸವನ್ನು ಯುವ ಕಲಾವಿದರು ಮುಂದೆ ತೆಗೆದುಕೊಂಡು ಹೋಗಬೇಕು. ಇಂತಹ ಉತ್ಸವಗಳು ಕಲಾವಿದರಿಗೆ ಉತ್ತಮ ವೇದಿಕೆ. ಹೊಸದನ್ನು ಕಲಿಯಿರಿ, ಶಿಬಿರವನ್ನು ಸದುಪಯೋಗ ಪಡಿಸಿಕೊಳ್ಳಿ’ ಎಂದರು.<br /> <br /> ಸ್ಥಳದಲ್ಲೇ ಚಿತ್ರ ಬಿಡಿಸುವ ಮೂಲಕ, ಹಿರಿಯ ಕಲಾವಿದ ಎಂ.ಸಿ. ಚಟ್ಟಿ ಶಿಬಿರ ಉದ್ಘಾಟಿಸಿದರು. ಮನೋಜ್ ಹಾನಗಲ್, ಬಿ.ವೈ. ನಾಗನಗೌಡ್ರ, ಡಾ. ಶಂಕರ ಕುಂದಗೋಳ, ಆರ್.ಬಿ. ಗರಗ, ಎಂ.ಜಿ. ಬಂಗ್ಲಿವಾಲೆ ಮತ್ತಿತರರು ಉಪಸ್ಥಿತರಿದ್ದರು. ಶಿಬಿರದಲ್ಲಿ ಹುಬ್ಬಳ್ಳಿ–ಧಾರವಾಡದ 35 ಯುವ ಕಲಾವಿದರು ಪಾಲ್ಗೊಂಡಿದ್ದಾರೆ. ಇದೇ 11ರವರೆಗೆ ಶಿಬಿರ ನಡೆಯುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>