‘ಕಾರಿನಲ್ಲಿ ಮೂರು ಜನರಿದ್ದರು. ಈ ಪೈಕಿ ಹಿಂಭಾಗದ ಸೀಟಿನಲ್ಲಿದ್ದ ಇಬ್ಬರು ವ್ಯಕ್ತಿಗಳ ನಡುವೆ ಇದ್ದ ಕೈಚೀಲದಲ್ಲಿ ಹಣ ಪತ್ತೆಯಾಗಿದೆ. ಕಾರಿನಲ್ಲಿದ್ದ ಬಾಗೇಪಲ್ಲಿಯ ಸುರೇಂದ್ರ ಎಂಬುವರು ಈ ಹಣ ತಮಗೆ ಸೇರಿದ್ದು ಎಂದು ಹೇಳಿದ್ದಾರೆ. ಆದರೆ ಸೂಕ್ತ ದಾಖಲೆಗಳನ್ನು ನೀಡಿಲ್ಲ’ ಎಂದು ಚುನಾವಣಾಧಿಕಾರಿ ಶಿವಸ್ವಾಮಿ ತಿಳಿಸಿದರು.