ಹಲ್ಲೆಗೆ ಒಳಗಾದ ಯುವಕ ಯುವತಿ ಹುಟ್ಟುಹಬ್ಬದ ಪಾರ್ಟಿ ಮುಗಿಸಿಕೊಂಡು ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಅವರನ್ನು ಹಿಂಬಾಲಿಸಿದ ದುಷ್ಕರ್ಮಿಗಳು ಅವರ ಕಾರನ್ನು ತಡೆಯಲು ಯತ್ನಿಸಿದ್ದಾರೆ. ಕಾರು ಚಾಲನೆ ಮಾಡುತ್ತಿದ್ದ ಯುವಕ ವಿಚಲಿತನಾಗಿ ಕಾರನ್ನು ರಸ್ತೆಯ ವಿಭಜಕಕ್ಕೆ ಗುದ್ದಿದ್ದಾನೆ. ಈ ವೇಳೆ ಯುವಕ ಯುವತಿಗೆ ಥಳಿಸಿದ ದುಷ್ಕರ್ಮಿಗಳು ಅವರ ಬಳಿ ಇದ್ದ ಚಿನ್ನದ ಸರ, ಮೊಬೈಲ್, ಎಟಿಎಂ ಕಾರ್ಡ್ ಕಿತ್ತುಕೊಂಡು ಪರಾರಿಯಾಗಿದ್ದಾರೆ.