ಸಾಗರ ತಾಲ್ಲೂಕಿನ ಅರಳಗೋಡು ಗ್ರಾಮ ಪಂಚಾಯತಿ,ಹೆದ್ದೂರು, ಶೇಡ್ಗಾರ್, ಸಾಲ್ಗಡಿ ಗ್ರಾಮ ಪಂಚಾಯಿತಿ,ತೀರ್ಥಹಳ್ಳಿ ತಾಲ್ಲೂಕಿನ ತಳಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸಭೆ ನಡೆಸಲಾಗಿದೆ. ಎಲ್ಲೆಡೆ ಇಲಾಖಾ ಸಮನ್ವಯ ಸಭೆ ನಡೆಸಲಾಗಿದೆ.ಜಿಲ್ಲಾ ಮಟ್ಟದಲ್ಲಿ ತಂಡ ರಚಿಸಿ, ಅವರಿಗೆ ಸೂಕ್ತ ತರಬೇತಿ ನೀಡಲಾಗಿದೆ. ಜಿಲ್ಲೆಯ ಎಲ್ಲಾ ವೈದ್ಯಾಧಿಕಾರಿಗಳು ಹಾಗೂ ಕ್ಷೇತ್ರ ಸಿಬ್ಬಂದಿಗೆ ರೋಗ ನಿಯಾಂತ್ರಣ ಕಾರ್ಯಕ್ರಮದ ಪುನರ್ಮನನತರಬೇತಿ ನೀಡಲಾಗಿದೆ ಎಂದುಮಾಹಿತಿ ನೀಡಿದ್ದಾರೆ.