ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದ್ಯಪಾನದಿಂದ ದೂರ ಇರಲು ಸಲಹೆ

Last Updated 20 ಸೆಪ್ಟೆಂಬರ್ 2019, 5:47 IST
ಅಕ್ಷರ ಗಾತ್ರ

ತೀರ್ಥಹಳ್ಳಿ: ಕುಡಿತದ ಚಟಕ್ಕೆ ಬಲಿಯಾಗಿ ಸಂಸಾರ, ಆರೋಗ್ಯವನ್ನು ಹಾಳುಮಾಡಿಕೊಳ್ಳುವುದರಿಂದ ಜನರು ದೂರ ಇರಬೇಕು. ಕುಡಿತದ ದುಷ್ಪರಿಣಾಮಗಳ ಬಗ್ಗೆ ಮಹಾತ್ಮ ಗಾಂಧೀಜಿ ಬಹಳ ಹಿಂದೆಯೇ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಿದ್ದರು ಎಂದು ಕಾಂಗ್ರೆಸ್‌ ಮುಖಂಡ ಕಿಮ್ಮನೆ ರತ್ನಾಕರ ಹೇಳಿದರು.

ಗುರುವಾರ ತಾಲ್ಲೂಕಿನ ಸೀತೂರು ವನದುರ್ಗಿ ದೇವಸ್ಥಾನದ ಸಭಾಂಗಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಮ್ಮಿಕೊಂಡಿದ್ದ 1398ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಮದ್ಯಪಾನ ಕೇವಲ ವ್ಯಕ್ತಿಯನ್ನು ಮಾತ್ರ ಸುಡುವುದಿಲ್ಲ. ಅದು ಕುಟುಂಬ, ಸಮಾಜಕ್ಕೆ ಅಂಟಿದ ಶಾಪವಾಗಿದೆ ಎಂದು ಹೇಳಿದರು.

ಸಮಾಜಸೇವಕ ಡಾ.ಜೀವಂದರ್ ಜೈನ್, ಮುಳುಬಾಗಿಲು ಗ್ರಾಮ ಪಂಚಾಯಿತಿ ಸದಸ್ಯ ಕೊರಕೋಟೆ ಶ್ರೀನಿವಾಸ್, ಮಾಗರವಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಈಚಲಬೈಲು ಶಶಿಧರ್, ಸಂತೋಷ್ ಹೆಗ್ಡೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT