<p><strong>ಶಿವಮೊಗ್ಗ:</strong> ಈ ಹಿಂದೆ ತಪ್ಪು ಮಾಡಿದವರನ್ನು, ಜೈಲಿಗೆ ಹೋಗಿ ಬಂದವರನ್ನು ಸಮಾಜ ಬಹಿಷ್ಕರಿಸುತ್ತಿತ್ತು. ಆದರಿಂದು ಜೈಲಿಗೆ ಹೋಗಿ ಬಂದವರಿಗೆ ಹಾರ ಹಾಕಿ ಸನ್ಮಾನಿಸುತ್ತಿದ್ದೇವೆ. ಹಾಗಾಗಿ ಶಿಕ್ಷೆಗೆ ಇಂದು ಜನರು ಹೆದರದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ವಿಷಾದ ವ್ಯಕ್ತಪಡಿಸಿದರು.</p>.<p>ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ರಾಷ್ಟ್ರೀಯ ಸ್ವಾಭಿಮಾನ ಆಂದೋಲನ ಶಿವಮೊಗ್ಗ ಘಟಕದಿಂದ ಭಾನುವಾರ ಏರ್ಪಡಿಸಿದ್ದ ಮಾಧವ ಗಾಡ್ಗೀಳ್ ವರದಿ ಜಾರಿಗೆ ಒತ್ತಾಯಿಸಿ ‘ಪಶ್ಚಿಮಘಟ್ಟ ಉಳಿಸಿ’ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಯುವಕರಲ್ಲಿ ಮೌಲ್ಯಗಳನ್ನು ತುಂಬಿ, ಪರಸರದಿಂದಾಗುವ ಹಾನಿಯ ಬಗ್ಗೆ ಮಾಹಿತಿ ನೀಡಿ ಅವರನ್ನು ಮುಂದಿನ ಪ್ರತಿಭಟನಕಾರರನ್ನಾಗಿ ಮಾಡಬೇಕಿದೆ ಎಂದರು.</p>.<p>ದೇಸಿ ಚಿಂತಕ ಹಾಗೂ ರಂಗಕರ್ಮಿ ಚರಕ ಪ್ರಸನ್ನ, ‘ಮಾಧವ ಗಾಡ್ಗೀಳ್ ವರದಿ ಸಮಗ್ರ ಸತ್ಯ. ಇದನ್ನು ಕಡೆಗಣಿಸಿದರೆ ಸಮಗ್ರವಾದ ವಿನಾಶ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p>ರಾಷ್ಟ್ರೀಯ ಸ್ವಾಭಿಮಾನ ಆಂದೋಲನದ ಸಂಸ್ಥಾಪಕರಾದ ಕೆ.ಎನ್.ಗೋವಿಂದಾಚಾರ್ಯ, ‘ಒಂದು ರಾಷ್ಟ್ರದ ಅಭಿವೃದ್ಧಿಯನ್ನು ಅಳೆಯಬೇಕಾದದ್ದು ಜಿಡಿಪಿಯಿಂದ ಅಲ್ಲ; ಬದಲಾಗಿ ಆ ದೇಶದ ಮಣ್ಣಿನ ಫಲವತ್ತತೆ, ಅಂತರ್ಜಲದ ಮಟ್ಟ, ಅರಣ್ಯ ಪ್ರದೇಶದ ವ್ಯಾಪ್ತಿ, ಪಶು–ಜಾನುವಾರು–ಮನುಷ್ಯನ ಅನುಪಾತ ಎಷ್ಟಿದೆ ಎಂಬುದರ ಆಧಾರದ ಮೇಲೆ’ ಎಂದರು.</p>.<p>ಪರಿಸರವನ್ನು ಅತಿ ಹೆಚ್ಚು ಹಾಳು ಮಾಡುವ ಯೋಜನೆಯೇ ಎತ್ತಿನಹೊಳೆ ಯೋಜನೆ ಎಂದು ಐಎಫ್ಎಸ್ ನಿವೃತ್ತ ಅಧಿಕಾರಿ ಯಲ್ಲಪ್ಪ ರೆಡ್ಡಿ ಹೇಳಿದರು.</p>.<p>ಪರಿಸರವಾದಿ ಪ್ರೊ.ಬಿ.ಎಂ.ಕುಮಾರಸ್ವಾಮಿ, ಜಿಯೋಲಾಜಿಕಲ್ ಸೊಸೈಟಿ ಆಫ್ ಇಂಡಿಯಾದ ಕಾರ್ಯದರ್ಶಿ ಆರ್.ಎಸ್.ಸಾವ್ಕಾರ್ ಉಪಸ್ಥಿತರಿದ್ದರು.</p>.<p><strong>ಸಮಾವೇಶದಲ್ಲಿ ತೆಗೆದುಕೊಂಡ ಪ್ರಮುಖ ನಿರ್ಣಯಗಳು</strong></p>.<p>1) ಪಶ್ಚಿಮ ಘಟ್ಟ ಪ್ರದೇಶವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗಂಭೀರವಾಗಿ ಪರಿಗಣಿಸಬೇಕು.<br />2) ಕೇರಳ ಮತ್ತು ಕೊಡಗು ಜಿಲ್ಲೆಯಲ್ಲಿ ಉಂಟಾದ ಭಾರಿ ಪ್ರವಾಹ, ಭೂ ಕುಸಿತ, ಪ್ರಾಣಹಾನಿ ಮತ್ತು ಆಸ್ತಿ ಹಾನಿಯ ಹಿನ್ನಲೆಯಲ್ಲಿ ಪಶ್ಚಿಮಘಟ್ಟಗಳ ಸಂರಕ್ಷಣೆಗೆ ಆದ್ಯತೆ ನೀಡಬೇಕು.<br />3) ಗಾಡ್ಗೀಳ್ ವರದಿಯನ್ನೇ ಪರಿಗಣಿಸಿ, ಖುದ್ದಾಗಿ ಜಾರಿಗೆ ತರಬೇಕು.<br />4) ಆಘಾತಕಾರಿ, ವಿನಾಶಕಾರಿ ಯೋಜನೆಗಳನ್ನು ಕೂಡಲೇ ನಿಲ್ಲಿಸಬೇಕು.<br />5) ಗಾಡ್ಗೀಳ್ ವರದಿಯ ಅನುಷ್ಠಾನದ ಸಂದರ್ಭದಲ್ಲಿ ಜನರಿಗೆ ನಷ್ಟಗಳು ಉಂಟಾದಲ್ಲಿ ಹೆಚ್ಚಿನ ಪರಿಹಾರ ನೀಡಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಈ ಹಿಂದೆ ತಪ್ಪು ಮಾಡಿದವರನ್ನು, ಜೈಲಿಗೆ ಹೋಗಿ ಬಂದವರನ್ನು ಸಮಾಜ ಬಹಿಷ್ಕರಿಸುತ್ತಿತ್ತು. ಆದರಿಂದು ಜೈಲಿಗೆ ಹೋಗಿ ಬಂದವರಿಗೆ ಹಾರ ಹಾಕಿ ಸನ್ಮಾನಿಸುತ್ತಿದ್ದೇವೆ. ಹಾಗಾಗಿ ಶಿಕ್ಷೆಗೆ ಇಂದು ಜನರು ಹೆದರದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ವಿಷಾದ ವ್ಯಕ್ತಪಡಿಸಿದರು.</p>.<p>ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ರಾಷ್ಟ್ರೀಯ ಸ್ವಾಭಿಮಾನ ಆಂದೋಲನ ಶಿವಮೊಗ್ಗ ಘಟಕದಿಂದ ಭಾನುವಾರ ಏರ್ಪಡಿಸಿದ್ದ ಮಾಧವ ಗಾಡ್ಗೀಳ್ ವರದಿ ಜಾರಿಗೆ ಒತ್ತಾಯಿಸಿ ‘ಪಶ್ಚಿಮಘಟ್ಟ ಉಳಿಸಿ’ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಯುವಕರಲ್ಲಿ ಮೌಲ್ಯಗಳನ್ನು ತುಂಬಿ, ಪರಸರದಿಂದಾಗುವ ಹಾನಿಯ ಬಗ್ಗೆ ಮಾಹಿತಿ ನೀಡಿ ಅವರನ್ನು ಮುಂದಿನ ಪ್ರತಿಭಟನಕಾರರನ್ನಾಗಿ ಮಾಡಬೇಕಿದೆ ಎಂದರು.</p>.<p>ದೇಸಿ ಚಿಂತಕ ಹಾಗೂ ರಂಗಕರ್ಮಿ ಚರಕ ಪ್ರಸನ್ನ, ‘ಮಾಧವ ಗಾಡ್ಗೀಳ್ ವರದಿ ಸಮಗ್ರ ಸತ್ಯ. ಇದನ್ನು ಕಡೆಗಣಿಸಿದರೆ ಸಮಗ್ರವಾದ ವಿನಾಶ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p>ರಾಷ್ಟ್ರೀಯ ಸ್ವಾಭಿಮಾನ ಆಂದೋಲನದ ಸಂಸ್ಥಾಪಕರಾದ ಕೆ.ಎನ್.ಗೋವಿಂದಾಚಾರ್ಯ, ‘ಒಂದು ರಾಷ್ಟ್ರದ ಅಭಿವೃದ್ಧಿಯನ್ನು ಅಳೆಯಬೇಕಾದದ್ದು ಜಿಡಿಪಿಯಿಂದ ಅಲ್ಲ; ಬದಲಾಗಿ ಆ ದೇಶದ ಮಣ್ಣಿನ ಫಲವತ್ತತೆ, ಅಂತರ್ಜಲದ ಮಟ್ಟ, ಅರಣ್ಯ ಪ್ರದೇಶದ ವ್ಯಾಪ್ತಿ, ಪಶು–ಜಾನುವಾರು–ಮನುಷ್ಯನ ಅನುಪಾತ ಎಷ್ಟಿದೆ ಎಂಬುದರ ಆಧಾರದ ಮೇಲೆ’ ಎಂದರು.</p>.<p>ಪರಿಸರವನ್ನು ಅತಿ ಹೆಚ್ಚು ಹಾಳು ಮಾಡುವ ಯೋಜನೆಯೇ ಎತ್ತಿನಹೊಳೆ ಯೋಜನೆ ಎಂದು ಐಎಫ್ಎಸ್ ನಿವೃತ್ತ ಅಧಿಕಾರಿ ಯಲ್ಲಪ್ಪ ರೆಡ್ಡಿ ಹೇಳಿದರು.</p>.<p>ಪರಿಸರವಾದಿ ಪ್ರೊ.ಬಿ.ಎಂ.ಕುಮಾರಸ್ವಾಮಿ, ಜಿಯೋಲಾಜಿಕಲ್ ಸೊಸೈಟಿ ಆಫ್ ಇಂಡಿಯಾದ ಕಾರ್ಯದರ್ಶಿ ಆರ್.ಎಸ್.ಸಾವ್ಕಾರ್ ಉಪಸ್ಥಿತರಿದ್ದರು.</p>.<p><strong>ಸಮಾವೇಶದಲ್ಲಿ ತೆಗೆದುಕೊಂಡ ಪ್ರಮುಖ ನಿರ್ಣಯಗಳು</strong></p>.<p>1) ಪಶ್ಚಿಮ ಘಟ್ಟ ಪ್ರದೇಶವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗಂಭೀರವಾಗಿ ಪರಿಗಣಿಸಬೇಕು.<br />2) ಕೇರಳ ಮತ್ತು ಕೊಡಗು ಜಿಲ್ಲೆಯಲ್ಲಿ ಉಂಟಾದ ಭಾರಿ ಪ್ರವಾಹ, ಭೂ ಕುಸಿತ, ಪ್ರಾಣಹಾನಿ ಮತ್ತು ಆಸ್ತಿ ಹಾನಿಯ ಹಿನ್ನಲೆಯಲ್ಲಿ ಪಶ್ಚಿಮಘಟ್ಟಗಳ ಸಂರಕ್ಷಣೆಗೆ ಆದ್ಯತೆ ನೀಡಬೇಕು.<br />3) ಗಾಡ್ಗೀಳ್ ವರದಿಯನ್ನೇ ಪರಿಗಣಿಸಿ, ಖುದ್ದಾಗಿ ಜಾರಿಗೆ ತರಬೇಕು.<br />4) ಆಘಾತಕಾರಿ, ವಿನಾಶಕಾರಿ ಯೋಜನೆಗಳನ್ನು ಕೂಡಲೇ ನಿಲ್ಲಿಸಬೇಕು.<br />5) ಗಾಡ್ಗೀಳ್ ವರದಿಯ ಅನುಷ್ಠಾನದ ಸಂದರ್ಭದಲ್ಲಿ ಜನರಿಗೆ ನಷ್ಟಗಳು ಉಂಟಾದಲ್ಲಿ ಹೆಚ್ಚಿನ ಪರಿಹಾರ ನೀಡಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>