ಮದ್ಯದಂಗಡಿಗೆ ನೋಟಿಸ್: ಮುಖ್ಯಮಂತ್ರಿ ಬಂದು ಹೋದ ನಂತರ ಶಿಕಾರಿಪುರ ತಾಲ್ಲೂಕಿನ ಮದ್ಯದ ಅಂಗಡಿಯೊಂದರಲ್ಲಿ ಒಂದೇ ದಿನ 2 ಸಾವಿರ ಬಾಟಲಿ ಮದ್ಯ ಮಾರಾಟ ಮಾಡಲಾಗಿದೆ. ವಿವರಣೆ ಕೇಳಿ ನೋಟಿಸ್ ನೀಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಕೆ.ಎ. ದಯಾನಂದ ಮಾಹಿತಿ ನೀಡಿದರು.
ರೈಲ್ವೆ ಇಲಾಖೆಗೆ ಪತ್ರ: ಜಿಲ್ಲೆಗೆ ಬರುವ ಮತ್ತು ಜಿಲ್ಲೆಯಿಂದ ಹೊರ ಹೋಗುವ ಕೆಲವು ರೈಲು ಬೋಗಿಗಳ ಮೇಲೆ ರಾಜ್ಯ ಸರ್ಕಾರದ ಯೋಜನೆಗಳ ಪ್ರಚಾರ ಜಾಹೀರಾತು ಇದ್ದು, ಅವುಗಳನ್ನು ತೆರವುಗೊಳಿಸುವಂತೆ ಜಿಲ್ಲಾ ಚುನಾವಣಾಧಿಕಾರಿಗಳು ರೈಲ್ವೆ ಇಲಾಖೆಗೆ ಪತ್ರ ಬರೆದಿದ್ದಾರೆ.
ಮತದಾರರಿಗೆ ಹಣ ಹಂಚಿಕೆ: ಇಲ್ಲಿನ ವಿನೋಬನಗರದಲ್ಲಿ ಶುಕ್ರವಾರ ಮತದಾರರಿಗೆ ಹಣ ಹಂಚುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.