ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ಕೊಲೆಗೆ ಬಿಜೆಪಿ ಸಂಚು: ಡಿ.ಕೆ.ಶಿವಕುಮಾರ್ ಶಂಕೆ

Last Updated 3 ಏಪ್ರಿಲ್ 2019, 13:47 IST
ಅಕ್ಷರ ಗಾತ್ರ

ಶಿವಮೊಗ್ಗ: ಚುನಾವಣೆ ಬಳಿಕ ಮುಖ್ಯಮಂತ್ರಿ ಕುಮಾರಸ್ವಾಮಿ ನೆಗೆದು ಬೀಳುತ್ತಾರೆ ಎಂಬ ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿಕೆ ಬಹುಶಃ ಕುಮಾರಸ್ವಾಮಿ ಕೊಲೆಗೆ ಬಿಜೆಪಿ ರೂಪಿಸಿದ ಸಂಚು ಇರಬಹುದು ಎಂದು ಸಚಿವ ಡಿ.ಕೆ.ಶಿವಕುಮಾರ್ ಅನುಮಾನ ವ್ಯಕ್ತಪಡಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು. ಹುಟ್ಟಿದ ಮೇಲೆ ಎಲ್ಲರೂ ಸಾಯಲೇಬೇಕು. ಆದರೆ, ಶಾಸಕ ಕೆ.ಎಸ್.ಈಶ್ವರಪ್ಪರ ಇಂತಹ ಹೇಳಿಕೆ ನೀಡಿರುವುದರ ಹಿಂದಿನ ಮರ್ಮ ಏನು ಎಂದು ಬಿಜೆಪಿ ಸ್ಪಷ್ಟಪಡಿಸಬೇಕು.

ಕೆ.ಎಸ್.ಈಶ್ವರಪ್ಪ ನಾಲಿಗೆ ಹರಿಬಿಡುತ್ತಿದ್ದರೂ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಏಕೆ ಕಡಿವಾಣ ಹಾಕುತ್ತಿಲ್ಲ? ಇದೇನಾ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಸಂಸ್ಕೃತಿ ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ಮುಸ್ಲಿಮರು ಬಿಜೆಪಿಗೆ ಬೆಂಬಲಿಸದ ಕಾರಣ ಅವರಿಗೆ ಟಿಕೆಟ್ ನೀಡಿಲ್ಲ ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಚುನಾವಣೆ ಸಮಯದಲ್ಲಿ ಬಿಜೆಪಿ ಜಾತಿ, ಧರ್ಮಗಳನ್ನು ಒಡೆದು ಆಳುವ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT