<p><strong>ಬೆಂಗಳೂರು: </strong>ಚೀನಾ ವಸ್ತುಗಳ ಬದಲು ಸೆಗಣಿಯಿಂದ ತಯಾರಿಸಿದ ಪರಿಸರಸ್ನೇಹಿ ಹಣತೆಗಳನ್ನು ಬಳಸುವ ಮೂಲಕ ಈ ಬಾರಿಯ ದೀಪಾವಳಿ ಹಬ್ಬವನ್ನು ಆಚರಿಸುವಂತೆ ರಾಷ್ಟ್ರೋತ್ಥಾನ ಪರಿಷತ್ ಮನವಿ ಮಾಡಿಕೊಂಡಿದೆ.</p>.<p>‘ರಾಷ್ಟ್ರೀಯ ಕಾಮಧೇನು ಆಯೋಗವು ದೇಶದಾದ್ಯಂತ ಸೆಗಣಿಯಿಂದ ತಯಾರಿಸಿದ ಹಣತೆಯ ಮೂಲಕ ದೀಪಾವಳಿ ಆಚರಿಸುವ ‘ಕಾಮಧೇನು ದೀಪಾವಳಿ’ ಎಂಬ ಬೃಹತ್ ಆಂದೋಲನ ಹಮ್ಮಿಕೊಂಡಿದೆ. ಈ ಅಭಿಯಾನಕ್ಕೆ ರಾಷ್ಟ್ರೋತ್ಥಾನ ಪರಿಷತ್ ಕೈಜೋಡಿಸಿದೆ. ಗೋವಿನ ಸೆಗಣಿಯನ್ನು ಬಳಸಿ ಕೊಂಡು 20 ಸಾವಿರಕ್ಕೂ ಅಧಿಕದೀಪಗಳನ್ನು ತಯಾರಿಸಿ, ಸಾರ್ವಜನಿಕರಿಗೆ ನೀಡಲಾಗುವುದು’ ಎಂದು ಪರಿಷತ್ನ ಪ್ರಧಾನ ಕಾರ್ಯದರ್ಶಿ ನಾ. ದಿನೇಶ್ ಹೆಗ್ಡೆ ತಿಳಿಸಿದ್ದಾರೆ.</p>.<p>‘ಆಯೋಗವು ದೇಶದಾದ್ಯಂತ 33 ಕೋಟಿ ದೀಪಗಳನ್ನು ತಯಾರಿಸುವ ಗುರಿ ಹೊಂದಿದೆ. ಶ್ರೀರಾಮನ ಜನ್ಮಸ್ಥಳವಾದ ಅಯೋಧ್ಯೆಯಲ್ಲಿ ಸೆಗಣಿಯಿಂದ ತಯಾರಿಸಿದ 3 ಲಕ್ಷ ದೀಪಗಳು ಹಾಗೂ ವಾರಣಾಸಿಯಲ್ಲಿ 1 ಲಕ್ಷ ದೀಪಗಳನ್ನು ಹಚ್ಚಲು ಆಯೋಗವು ನಿರ್ಧರಿಸಿದೆ. ಇದೇ ರೀತಿ, ಮನೆಗಳು ಹಾಗೂ ದೇವಾಲಯಗಳಲ್ಲಿ ಸೆಗಣಿಯಿಂದ ತಯಾರಿಸಿದ ದೀಪಗಳಿಂದ ದೀಪಾವಳಿ ಆಚರಿಸಬೇಕಿದೆ. ಈ ಬಾರಿಯ ದೀಪಾವಳಿಯಲ್ಲಿ ಸೆಗಣಿ ಹಾಗೂ ಪಂಚಗವ್ಯವನ್ನು ವ್ಯಾಪಕವಾಗಿ ಬಳಸುವ ಮೂಲಕ ಸ್ವಚ್ಛ ಮತ್ತು ಆರೋಗ್ಯಪೂರ್ಣ ದೀಪಾವಳಿ ಆಚರಿಸೋಣ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಚೀನಾ ವಸ್ತುಗಳ ಬದಲು ಸೆಗಣಿಯಿಂದ ತಯಾರಿಸಿದ ಪರಿಸರಸ್ನೇಹಿ ಹಣತೆಗಳನ್ನು ಬಳಸುವ ಮೂಲಕ ಈ ಬಾರಿಯ ದೀಪಾವಳಿ ಹಬ್ಬವನ್ನು ಆಚರಿಸುವಂತೆ ರಾಷ್ಟ್ರೋತ್ಥಾನ ಪರಿಷತ್ ಮನವಿ ಮಾಡಿಕೊಂಡಿದೆ.</p>.<p>‘ರಾಷ್ಟ್ರೀಯ ಕಾಮಧೇನು ಆಯೋಗವು ದೇಶದಾದ್ಯಂತ ಸೆಗಣಿಯಿಂದ ತಯಾರಿಸಿದ ಹಣತೆಯ ಮೂಲಕ ದೀಪಾವಳಿ ಆಚರಿಸುವ ‘ಕಾಮಧೇನು ದೀಪಾವಳಿ’ ಎಂಬ ಬೃಹತ್ ಆಂದೋಲನ ಹಮ್ಮಿಕೊಂಡಿದೆ. ಈ ಅಭಿಯಾನಕ್ಕೆ ರಾಷ್ಟ್ರೋತ್ಥಾನ ಪರಿಷತ್ ಕೈಜೋಡಿಸಿದೆ. ಗೋವಿನ ಸೆಗಣಿಯನ್ನು ಬಳಸಿ ಕೊಂಡು 20 ಸಾವಿರಕ್ಕೂ ಅಧಿಕದೀಪಗಳನ್ನು ತಯಾರಿಸಿ, ಸಾರ್ವಜನಿಕರಿಗೆ ನೀಡಲಾಗುವುದು’ ಎಂದು ಪರಿಷತ್ನ ಪ್ರಧಾನ ಕಾರ್ಯದರ್ಶಿ ನಾ. ದಿನೇಶ್ ಹೆಗ್ಡೆ ತಿಳಿಸಿದ್ದಾರೆ.</p>.<p>‘ಆಯೋಗವು ದೇಶದಾದ್ಯಂತ 33 ಕೋಟಿ ದೀಪಗಳನ್ನು ತಯಾರಿಸುವ ಗುರಿ ಹೊಂದಿದೆ. ಶ್ರೀರಾಮನ ಜನ್ಮಸ್ಥಳವಾದ ಅಯೋಧ್ಯೆಯಲ್ಲಿ ಸೆಗಣಿಯಿಂದ ತಯಾರಿಸಿದ 3 ಲಕ್ಷ ದೀಪಗಳು ಹಾಗೂ ವಾರಣಾಸಿಯಲ್ಲಿ 1 ಲಕ್ಷ ದೀಪಗಳನ್ನು ಹಚ್ಚಲು ಆಯೋಗವು ನಿರ್ಧರಿಸಿದೆ. ಇದೇ ರೀತಿ, ಮನೆಗಳು ಹಾಗೂ ದೇವಾಲಯಗಳಲ್ಲಿ ಸೆಗಣಿಯಿಂದ ತಯಾರಿಸಿದ ದೀಪಗಳಿಂದ ದೀಪಾವಳಿ ಆಚರಿಸಬೇಕಿದೆ. ಈ ಬಾರಿಯ ದೀಪಾವಳಿಯಲ್ಲಿ ಸೆಗಣಿ ಹಾಗೂ ಪಂಚಗವ್ಯವನ್ನು ವ್ಯಾಪಕವಾಗಿ ಬಳಸುವ ಮೂಲಕ ಸ್ವಚ್ಛ ಮತ್ತು ಆರೋಗ್ಯಪೂರ್ಣ ದೀಪಾವಳಿ ಆಚರಿಸೋಣ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>