ವಿಜಯಪುರ: ‘ಪ್ರತಿಯೊಬ್ಬರಲ್ಲಿ ಪರಿಸರ ಪ್ರಜ್ಞೆ ಇರಬೇಕು. ಪರಿಸರ ರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು’ ಎಂದು ಮುಖ್ಯ ಶಿಕ್ಷಕಿ ರೆಹಾನಾ ಮನಗೂಳಿ ಹೇಳಿದರು.
ಸಿಕ್ಯಾಬ್ ಶಾಲೆಯ ಆವರಣದಲ್ಲಿ ಈಚೆಗೆ ಆಯೋಜಿಸಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಪ್ರತಿಯೊಬ್ಬರು ಸಸಿಗಳನ್ನು ನೆಟ್ಟು, ಅವುಗಳನ್ನು ಮಕ್ಕಳಂತೆ ಪೋಷಿಸಬೇಕು. ಆಧುನಿಕತೆ ಹೆಚ್ಚಾದಂತೆ ಪರಿಸರ ನಾಶವೂ ಹೆಚ್ಚಾಗುತ್ತಿದೆ. ಇದರಿಂದ ಮಾನವ ಕುಲದ ಮೇಲೆ ದುಷ್ಪರಿಣಾಮ ಬೀರುತ್ತದೆ. ಮುಂದೊದು ದಿನ ಉತ್ತಮ ಗಾಳಿ ಸಿಗದೆ ತೊಂದರೆ ಎದುರಿಸಬೇಕಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರು ಸಸಿಗಳನ್ನು ನೆಟ್ಟು ಬೆಳೆಸಬೇಕು’ ಎಂದು ತಿಳಿಸಿದರು.