ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ವ್ಯಾಪ್ತಿಯ ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಯಿಂದ ಪ್ರವಾಹ ಉಂಟಾದ ಕಾರಣ ಸ್ನಾತಕ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.
‘ಅ.25 ರಿಂದ ಪ್ರಾರಂಭವಾಗಬೇಕಿದ್ದ ಸ್ನಾತಕ ಪದವಿ ಪರೀಕ್ಷೆಗಳನ್ನು ನವೆಂಬರ್ 6 ಕ್ಕೆ ಮುಂದೂಡಲಾಗಿದೆ’ ಎಂದು ವಿಶ್ವವಿದ್ಯಾನಿಲಯದ ಮೌಲ್ಯಮಾಪನ ಕುಲಸಚಿವ ಪ್ರೊ.ಪಿ.ಜಿ.ತಡಸದ ತಿಳಿಸಿದ್ದಾರೆ.
‘ಪರಿಷ್ಕೃತ ವೇಳಾ ಪಟ್ಟಿಯನ್ನು ಶೀಘ್ರದಲ್ಲಿಯೇ ವಿಶ್ವವಿದ್ಯಾನಿಲಯದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು’ ಎಂದು ಮಾಹಿತಿ ನೀಡಿದ್ದಾರೆ.