ಬಸವ-ವನ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಗಂಗಾಧರ ವಾಲಿಯವರು, ಭುಜಂಗ ಶೆಟ್ಟಿಯವರ ಸಮಾಜಮುಖಿ ಸೇವೆ ಅವಿಸ್ಮರಣೀಯ ಹಾಗೂ ಅನುಕರಣೀಯ ಎಂದು ಹೇಳಿದರು. ಇಂದಿನ ಕಾರ್ಯಕ್ರಮ ಅವರ ಆಶಯದಂತೆ ಅವರ ಅನುಪಸ್ಥಿತಿಯಲ್ಲಿ ನಡೆಯುತ್ತಿದೆ. ಭುಜಂಗ ಶೆಟ್ಟಿ ಅವರು ಇಂದು ಭೌತಿಕವಾಗಿ ನಮ್ಮೊಡನೆ ಇಲ್ಲದಿದ್ದರೂ ಮಾನಸಿಕವಾಗಿ ನಮ್ಮೊಂದಿಗೆ ಇದ್ದಾರೆ ಎಂದು ಹೇಳಿದರು.
174 ಜನರು ಉಚಿತವಾಗಿ ಕಣ್ಣಿನ ಪೊರೆ ಚಿಕಿತ್ಸೆ ಮಾಡಿಸಿಕೊಳ್ಳುವ ಪ್ರಯೋಜನ ಪಡೆದುಕೊಂಡರು. 51 ಜನರು ನೇತ್ರದಾನ ಮಾಡಿದರು.
ಕಾರ್ಯಕ್ರಮದಲ್ಲಿ ಡಾ ವೆಂಕಟಪ್ಪ, ಆಶಾದೇವಿ ಪಾಟೀಲ ಸೇರಿದಂತೆ ಇತರರು ಇದ್ದರು. ಶೋಭಾ ನಂಜುಂಡಸ್ವಾಮಿ ಕಾರ್ಯಕ್ರಮದ ನಿರೂಪಣೆ ಮಾಡಿದರು. ದತ್ತಾತ್ರೇಯ ಜೋಶಿ ಸ್ವಾಗತ ಭಾಷಣ ಮಾಡಿದರು. ಸಂಜೀವಮೂರ್ತಿ ವಂದನಾರ್ಪಣೆ ಮಾಡಿದರು.
ಶಿಬಿರದಲ್ಲಿ ಬಸವ-ವನ ಕ್ಷೇಮಾಭಿವೃದ್ಧಿ ಸಂಘ, ಬಸವ-ವನ ಮಹಿಳಾ ಸಂಘ ಮತ್ತು ಬಸವ-ವನ ನಗೆಕೂಟದ ಪದಾಧಿಕಾರಿಗಳು ಹಾಜರಿದ್ದರು. ನೂರಾರು ಸಂಖ್ಯೆಯಲ್ಲಿ ನಾಗರೀಕರು ಆಗಮಿಸಿದ್ದರು.